ಎಂವೈ ಪಾಟೀಲ್ 
ರಾಜಕೀಯ

ಕಲಬುರ್ಗಿ: ಬಿಜೆಪಿ ತೊರೆದ ಮಾಜಿ ಶಾಸಕ ಎಂವೈ ಪಾಟೀಲ್ ಕಾಂಗ್ರೆಸ್ ಸೇರ್ಪಡೆ

ಇತ್ತೀಚೆಗಷ್ಟೇ ’ಕೈ’ ಬಿಟ್ಟು ’ಕಮಲ’ ಹಿಡಿದಿದ್ದ ಮಾಲಿಕಯ್ಯ ಗುತ್ತೇದಾರ್ ರಾಜಕೀಯ ನಡೆಯ ಬೆನ್ನಿಗೇ ಅಫಜಲಪುರದ ಮಾಜಿ ಬಿಜೆಪಿ ಶಾಸಕಎಂ ಪಾಟೀಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕಲಬುರ್ಗಿ: ಇತ್ತೀಚೆಗಷ್ಟೇ ’ಕೈ’ ಬಿಟ್ಟು ’ಕಮಲ’ ಹಿಡಿದಿದ್ದ ಮಾಲಿಕಯ್ಯ ಗುತ್ತೇದಾರ್ ರಾಜಕೀಯ ನಡೆಯ ಬೆನ್ನಿಗೇ ಅಫಜಲಪುರದ ಮಾಜಿ ಬಿಜೆಪಿ ಶಾಸಕ ಎಂವೈ ಪಾಟೀಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆಅವರ ಸಮ್ಮುಖದಲ್ಲಿ ಪಾಟೀಲ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಪರಮೇಶ್ವರ್ ಅವರು ಪಾಟೀಲ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅವರನ್ನು ಪಕ್ಷಕ್ಕೆ ವಿದ್ಯುಕ್ತವಾಗಿ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಪರಮೇಶ್ವರ್  "ನಾವು ಮಾಲಿಕಯ್ಯ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ನಡೆಸಿದ್ದೆವು. ಆದರೆ ಅವರು ಪಕ್ಷದ ನಾಯಕರ ವಿರುದ್ಧವೇ ಮಾತನಾಡಿದ್ದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಎಂವೈ ಪಾಟೀಲ್ ಈ ಭಾಗದಲ್ಲಿ ಒಳ್ಳೆಯ ಹೆಸರಿರುವ ನಾಯಕರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ನಮಗೆ ಅತ್ಯಂತ ಸಂತಸ ತಂದಿದೆ" ಎಂದರು.
ಕಲಬುರ್ಗಿಯ ಅಫಜಲಪುರ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿದ್ದ ಹಿರಿಯ ಕಾಂಗ್ರೆಸ್ ಧುರೀಣ ಮಾಲಿಕಯ್ಯ ಗುತ್ತೇದಾರ್ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರ ವಿರುದ್ಧವೇ ಹೇಳಿಕೆಗಳನ್ನು ನೀಡಿದ್ದರು. ಈ ಕಾರಣ ಕಾಂಗ್ರೆಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?