ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ತಲೆಗೆ ಸಣ್ಣ ಗಾಯಗಳಿಂದ ಪಾರಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಲ್ಲಿನ ಮಾವಿನಹಳ್ಳಿಯಲ್ಲಿ ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಮಧ್ಯಾಹ್ನ ಊಟಕ್ಕೆ ಕುಳಿತಿದ್ದಾಗ ...

ಮೈಸೂರು: ಇಲ್ಲಿನ ಮಾವಿನಹಳ್ಳಿಯಲ್ಲಿ ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಮಧ್ಯಾಹ್ನ ಊಟಕ್ಕೆ ಕುಳಿತಿದ್ದಾಗ ಪ್ಲಾಸ್ಟಿಕ್ ಕುರ್ಚಿಯಿಂದ ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಲೆಗೆ ಸ್ವಲ್ಪ ಏಟಾಗಿದೆ. ಕೂಡಲೇ ಅವರು ಸಹಜ ಸ್ಥಿತಿಗೆ ಬಂದು ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಿದರು.

ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿಯ ದರಿಪುರ, ಬರದನಾಪುರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ನಂತರ ನಿನ್ನೆ ಮಧ್ಯಾಹ್ನ ಮಾವಿನಹಳ್ಳಿಯಲ್ಲಿ ಪಕ್ಷದ ಮುಖಂಡರೊಬ್ಬರ ಮನೆಗೆ ಊಟಕ್ಕೆ ತೆರಳಿದ್ದರು. ಅವರು ಮಾಜಿ ಶಾಸಕ ಸತ್ಯನಾರಾಯಣ ಮತ್ತು ವಕೀಲ ಸ್ನೇಹಿತ ಮಾವಿನಹಳ್ಳಿ ಸಿದ್ದೇಗೌಡ ಜೊತೆಗೆ ಊಟಕ್ಕೆ ಕುಳಿತಿದ್ದರು. ಮುಖ್ಯಮಂತ್ರಿಯವರು ಕುಳಿತಿದ್ದ ಕುರ್ಚಿ ಆಯತಪ್ಪಿ ಕೆಳಗೆ ಬಿದ್ದಿತು. ಅದೃಷ್ಟವಶಾತ್ ಮುಖ್ಯಮಂತ್ರಿಯವರಿಗೆ ಗಾಯಗಳಾಗಲಿಲ್ಲ.

ತಕ್ಷಣವೇ ಭದ್ರತಾ ಸಿಬ್ಬಂದಿ ನೆರವಿಗೆ ಧಾವಿಸಿದರು. ಪಕ್ಷದ ಕಾರ್ಯಕರ್ತರಿಗೆ ಒಂದು ಬಾರಿ ಗಾಬರಿಯಾಯಿತು. ವೃತ್ತಿಯಲ್ಲಿ ವೈದ್ಯರಾಗಿರುವ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ಬಂದರು. ತಲೆಯಲ್ಲಿ ಸ್ವಲ್ಪ ಗಾಯವಾಗಿದೆಯಷ್ಟೆ ಎಂದು ಪರೀಕ್ಷಿಸಿ ಹೇಳಿದರು.

ಸ್ವಲ್ಪವೇ ಹೊತ್ತಿನಲ್ಲಿ ಮುಖ್ಯಮಂತ್ರಿಯವರು ಸುಧಾರಿಸಿಕೊಂಡರು. ಊಟ ಮುಗಿಸಿ ಮತ್ತೆ ಚುನಾವಣಾ ಪ್ರಚಾರ ಆರಂಭಿಸಿದರು. ನಂತರ ಬೆಂಗಳೂರಿಗೆ ವಿಮಾನದಲ್ಲಿ ತೆರಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT