ವಿ.ಸೋಮಣ್ಣ ಮತ್ತು ಯಡಿಯೂರಪ್ಪ
ಬೆಂಗಳೂರು: ಹನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬ ಮಾಜಿ ಸಚಿವ ವಿ. ಸೋಮಣ್ಣ ಮಹಾದಾಸೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಣ್ಣೀರೆರಚಿದ್ದಾರೆ. ಸೋಮಣ್ಣ ಅವರ ಬದಲಿಗೆ ಪರಿಮಳಾ ನಾಗಪ್ಪ ಅವರ ಪುತ್ರ ಡಾ. ಪ್ರೀತಮ್ ಅವರಿಗೆ ಟಿಕೆಟ್ ನೀಡಲು ಬಿಎಸ್ ವೈ ನಿರ್ಧರಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಉತ್ಸಾಹದಲ್ಲಿದ್ದ ಸೋಮಣ್ಣ ಹಲವು ದಿನಗಳಿಂದ ಕ್ಷೇತ್ರದಲ್ಲಿ ಪ್ರವಾಸ ನಡೆಸಿ ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ ಪ್ರೀತಮ್ ಗೆ ಟಿಕೆಟ್ ನೀಡುವುದನ್ನು ದೃಡ ಪಡಿಸಿರುವ ಯಡಿಯೂರಪ್ಪ ಹನೂರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎದ್ದಿದ್ದ ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
ಹನೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಸೋಮಣ್ಣ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದರು. ಆದರೆ ವಿಧಾನ ಪರಿಷತ್ ಸದಸ್ಯರಾಗಿರುವ ಸೋಮಣ್ಣ ಅವರ ಅವಧಿ ಪೂರ್ಣಗೊಳ್ಳಲವಿ ಇನ್ನೂ 3 ವರ್ಷ ಸಮಯವಿದೆ, ಹೀಗಾಗಿ ಟಿಕೆಟ್ ನೀಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವೇಳೆ ಸೋಮಣ್ಣ ಅವರನ್ನು ಪರಿಗಣಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos