ಪಿ.ಎಚ್. ನೀರಲಕೇರಿ 
ರಾಜಕೀಯ

ಪಕ್ಷದಲ್ಲಿ ತಲೆ ಹಿಡುಕರಿಗೆ, ಚೇಲಾಗಳಿಗೆ ಮಾತ್ರ ಆದ್ಯತೆ': ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ

: ತಲೆ ಹಿಡುಕರು ಹಾಗೂ ಚೇಲಾಗಲಿಗೆ ಮಾತ್ರವೇ ಪಕ್ಷದಲ್ಲಿ ಪ್ರಾಮುಖ್ಯತೆ. ಪಕ್ಷಕ್ಕಾಗಿ ದುಡಿಯುವವರಿಗೆ ಯಾವುದೇ ಆದ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ...

ಹುಬ್ಬಳ್ಳಿ: ತಲೆ ಹಿಡುಕರು ಹಾಗೂ ಚೇಲಾಗಲಿಗೆ ಮಾತ್ರವೇ ಪಕ್ಷದಲ್ಲಿ ಪ್ರಾಮುಖ್ಯತೆ. ಪಕ್ಷಕ್ಕಾಗಿ ದುಡಿಯುವವರಿಗೆ ಯಾವುದೇ ಆದ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶಿವಮೊಗ್ಗಕ್ಕೆ ತೆರಳುತ್ತಿದ್ದ ರಾಹುಲ್​ ಗಾಂಧಿಯನ್ನು ಭೇಟಿ ಮಾಡಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ  ನಿರಲಕೇರಿ ಹೋಗಿದ್ದರು, ಆದರೆ ಅವರನ್ನು ಒಳಗೆ ಪ್ರವೇಶಿಸದಂತೆ ಹಿರಿಯ ಮುಖಂಡ  ಕೆ,ಎನ್ ರೆಡ್ಡಿ ಅಡ್ಡಿ ಪಡಿಸಿದ್ದಾರೆ, ಅವರಿಗೆ ಪ್ರವೇಶ ನೀಡದ ಕಾರಣ ಈ ರೀತಿ ಅಸಮಾಧಾನ ಹೊರ ಹಾಕಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಕ್ಕೆ ಆಗಮಿಸಿದಾಗ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರುಗಳು ಜೊತೆ ಸಭೆ ನಡೆಸುವುದು ಹಾಗೂ ಅದಕ್ಕೆ ಬೇಕಾದ ಸಿದ್ಧತೆ ನಡೆಸಬೇಕಾಗಿರುತ್ತದೆ, ಆದರೆ ಇಂದು ಹಿರಿಯ ನಾಯಕರು ರಾಹುಲ್ ಗಾಂಧಿಯನ್ನು  ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.
ತಮಗೆ ವಿಮಾನ ನಿಲ್ದಣ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂಬ ಕೋಪದಲ್ಲಿ ಕೆಲ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದೆ, ಅದಕ್ಕಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ಪ್ರಾಮಾಣಿಕ ಕಾರ್ಯಕರ್ತರಿಗೆ ಪಕ್ಷದಲ್ಲಿ ಆದ್ಯತೆ ನೀಡುತ್ತಿಲ್ಲ, ಕಡೆಗಣಿಸುತ್ತಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT