ಪಿ.ಎಚ್. ನೀರಲಕೇರಿ 
ರಾಜಕೀಯ

ಪಕ್ಷದಲ್ಲಿ ತಲೆ ಹಿಡುಕರಿಗೆ, ಚೇಲಾಗಳಿಗೆ ಮಾತ್ರ ಆದ್ಯತೆ': ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ

: ತಲೆ ಹಿಡುಕರು ಹಾಗೂ ಚೇಲಾಗಲಿಗೆ ಮಾತ್ರವೇ ಪಕ್ಷದಲ್ಲಿ ಪ್ರಾಮುಖ್ಯತೆ. ಪಕ್ಷಕ್ಕಾಗಿ ದುಡಿಯುವವರಿಗೆ ಯಾವುದೇ ಆದ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ...

ಹುಬ್ಬಳ್ಳಿ: ತಲೆ ಹಿಡುಕರು ಹಾಗೂ ಚೇಲಾಗಲಿಗೆ ಮಾತ್ರವೇ ಪಕ್ಷದಲ್ಲಿ ಪ್ರಾಮುಖ್ಯತೆ. ಪಕ್ಷಕ್ಕಾಗಿ ದುಡಿಯುವವರಿಗೆ ಯಾವುದೇ ಆದ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶಿವಮೊಗ್ಗಕ್ಕೆ ತೆರಳುತ್ತಿದ್ದ ರಾಹುಲ್​ ಗಾಂಧಿಯನ್ನು ಭೇಟಿ ಮಾಡಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ  ನಿರಲಕೇರಿ ಹೋಗಿದ್ದರು, ಆದರೆ ಅವರನ್ನು ಒಳಗೆ ಪ್ರವೇಶಿಸದಂತೆ ಹಿರಿಯ ಮುಖಂಡ  ಕೆ,ಎನ್ ರೆಡ್ಡಿ ಅಡ್ಡಿ ಪಡಿಸಿದ್ದಾರೆ, ಅವರಿಗೆ ಪ್ರವೇಶ ನೀಡದ ಕಾರಣ ಈ ರೀತಿ ಅಸಮಾಧಾನ ಹೊರ ಹಾಕಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಕ್ಕೆ ಆಗಮಿಸಿದಾಗ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರುಗಳು ಜೊತೆ ಸಭೆ ನಡೆಸುವುದು ಹಾಗೂ ಅದಕ್ಕೆ ಬೇಕಾದ ಸಿದ್ಧತೆ ನಡೆಸಬೇಕಾಗಿರುತ್ತದೆ, ಆದರೆ ಇಂದು ಹಿರಿಯ ನಾಯಕರು ರಾಹುಲ್ ಗಾಂಧಿಯನ್ನು  ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.
ತಮಗೆ ವಿಮಾನ ನಿಲ್ದಣ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂಬ ಕೋಪದಲ್ಲಿ ಕೆಲ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದೆ, ಅದಕ್ಕಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ಪ್ರಾಮಾಣಿಕ ಕಾರ್ಯಕರ್ತರಿಗೆ ಪಕ್ಷದಲ್ಲಿ ಆದ್ಯತೆ ನೀಡುತ್ತಿಲ್ಲ, ಕಡೆಗಣಿಸುತ್ತಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT