ಸಿಎಂ ಸಿದ್ದರಾಮಯ್ಯ 
ರಾಜಕೀಯ

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ:ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಬಾದಾಮಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ....

ಬೆಂಗಳೂರು; ಉತ್ತರ ಕರ್ನಾಟಕದ ಬಾದಾಮಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಕ್ಷದ ಮುಖಂಡರು ಮೈಸೂರಿನ ಚಾಮುಂಡಿ ಮಾತ್ರವಲ್ಲದೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ನೀಡಿರುವ ಆಹ್ವಾನವನ್ನು ಇನ್ನೂ ಪರಿಗಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಬಾದಾಮಿ ಅಥವಾ ಬೇರೆ ಇನ್ನಾವುದೋ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಪಕ್ಷದ ಮುಖಂಡರು ಆಹ್ವಾನ ನೀಡಿರುವುದು ನಿಜ. ಆದರೆ ನಾನಿನ್ನೂ ಆ ಬಗ್ಗೆ ನಿರ್ಧರಿಸಿಲ್ಲ ಎಂದರು.

ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಆರಿಸಿ ಬರುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು,
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೈಜೋಡಿಸಿದ್ದಾರೆ ಎನಿಸುತ್ತದೆ. 2006ರಲ್ಲಿ ಅವರು ಮೈತ್ರಿ ಮಾಡಿಕೊಂಡಿದ್ದರು. ಆದರೆ ಚುನಾವಣೆಯಲ್ಲಿ ಯಾರು ಗೆದ್ದರು? ಈಗಲೂ ಕೂಡ ಕುಮಾರಸ್ವಾಮಿ ಮತ್ತು ಯಡಿಯೂರಪ್ಪನವರು ಒಂದಾಗಿದ್ದಾರೆ. ಆದರೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ ಎಂದರು.

ಚುನಾವಣೆಗೆ ಅಧಿಕೃತ ಯಂತ್ರೋಪಕರಣಗಳನ್ನು ಬಳಸುತ್ತಿರುವುದಾಗಿ ತಮ್ಮ ಮೇಲೆ ಕೇಳಿಬರುತ್ತಿರುವ ಆರೋಪಗಳನ್ನು ತಳ್ಳಿಹಾಕಿದ ಸಿದ್ದರಾಮಯ್ಯ, ಈ ಹಿಂದೆ ಕೂಡ ಆ ರೀತಿ ಮಾಡಿಲ್ಲ, ಇನ್ನು ಮುಂದಿನ ಚುನಾವಣೆಗಳಲ್ಲಿ ಕೂಡ ಆ ರೀತಿ ಮಾಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT