ವಿಜಯೇಂದ್ರ ಮತ್ತು ಡಾ. ಯತೀಂದ್ರ 
ರಾಜಕೀಯ

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಖಚಿತ: ವಿ. ಸೋಮಣ್ಣಗೆ ಸಿಗಲಿಲ್ಲ ಹನೂರು ಕ್ಷೇತ್ರ

ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವರುಣ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಕಣಕ್ಕಿಳಿಯಲಿದ್ದಾರೆ. ..

ಬೆಂಗಳೂರು:  ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವರುಣ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಕಣಕ್ಕಿಳಿಯಲಿದ್ದಾರೆ. ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಅಭ್ಯರ್ಥಿ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ನಿರ್ಧರಿಸಿದೆ.
ಮೈಸೂರು, ಚಾಮರಾನಗರ ಸೇರಿ ಒಟ್ಟು ಆರು ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಗರ ಹೊರವಲಯದ ರೆಸಾರ್ಟ್‌ನಲ್ಲಿ ಶುಕ್ರವಾರ ನಡೆದ ಬಿಜೆಪಿ ಸಭೆಯಲ್ಲಿ ವಿಜಯೇಂದ್ರ ಹೆಸರು ಮಾತ್ರ ಪ್ರಸ್ತಾಪವಾಗಿದೆ. ಹೀಗಾಗಿ ಸಿಎಂ ಪುತ್ರ ಡಾ.ಯತೀಂದ್ರ  ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಎದುರಾಳಿಯಾಗುವುದು ಬಹುತೇಕ ಖಚಿತವಾಗಿದೆ.
ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು 16 ಮಂದಿ ಉತ್ಸುಕರಾಗಿದ್ದರು, ಅವರನ್ನೆಲ್ಲಾ ಬದಿಗಿಟ್ಟು ವಿಜಯೇಂದ್ರ ಹೆಸರನ್ನು ಅಂತಿಮಗೊಳಿಸಲಾಗಿದೆ. 
ಮೇಲ್ಮನೆ ಸದಸ್ಯ ವಿ.ಸೋಮಣ್ಣ ಅವರಿಗೆ ಹನೂರು ಕ್ಷೇತ್ರದಿಂದ ಟಿಕೆಟ್‌ ಸಿಗುವ ಸಾಧ್ಯತೆಗಳಿಲ್ಲ.  ಹನೂರು ಕ್ಷೇತ್ರದಿಂದ ಪ್ರೀತಂ ನಾಗಪ್ಪ  ಅವರು ಸ್ಪರ್ಧಿಸಲಿದ್ದಾರೆ.
ಇನ್ನೂ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಜೆಪಿ ಯಡಿಯೂರಪ್ಪ ಅವರು ಎಲ್ಇಡಿ ಪರದೆಗಳುಳ್ಳ 100 ವಾಹನಗಳಿಗೆ ಚಾಲನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT