ಪೌರ ಕಾರ್ಮಿಕರ ಜೊತೆೆ ರಾಹುಲ್ ಗಾಂಧಿ 
ರಾಜಕೀಯ

ಪೌರ ಕಾರ್ಮಿಕರ ಜೊತೆ ಸಂವಾದ: ಶಿಷ್ಟಾಚಾರ ಮುರಿದ ರಾಹುಲ್ ಗಾಂಧಿ

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿಧಾನಸಭೆ ಕ್ಷೇತ್ರ ಗಾಂಧಿನಗರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜೊತೆ...

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿಧಾನಸಭೆ ಕ್ಷೇತ್ರ ಗಾಂಧಿನಗರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜೊತೆ ಸಂವಾದ ನಡೆಸಿದರು, ಸುಮಾರು 15 ನಿಮಿಷಗಳ ಕಾಲ ನಡೆದ ಸಂವಾದದಲ್ಲಿ ರಾಹುಲ್ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.
ಪೌರ ಕಾರ್ಮಿಕರ ಜೊತೆಗಿನ ಸಂವಾದದಲ್ಲಿ ವೇದಿಕೆ ಬಳಿ ತೆರಳದ ರಾಹುಲ್ ಸಭೆ ಅಂತ್ಯವಾಗುವವರೆಗೂ ನಿಂತುಕೊಂಡೇ ಮಾತನಾಡಿದರು.
ರಾಹುಲ್ ಗಾಂಧಿಗೆ ಕೈಕುಲುಕಿದ ಪೌರ ಕಾರ್ಮಿಕರು ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು, ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಬಿಬಿಎಂಪಿ ಮೇಯರ್ ಸಂಪತ್ ಕುಮಾರ್ ಈ ವೇಳೆ ಹಾಜರಿದ್ದರು. 
ಕರ್ನಾಟಕ  ಸರ್ಕಾರ ಮಧ್ಯವರ್ತಿಗಳು ಮತ್ತು ಗುತ್ತಿಗೆದಾರರನ್ನು ದೂರ ಇಡುವ ವ್ಯವಸ್ಥೆ ಮಾಡಿದೆ, ಪೌರ ಕಾರ್ಮಿಕರ ಕೆಲಸವನ್ನು ಕಾಯಂ ಗೊಳಿಸಲಾಗುವುದು ಎಂದು ಭರವಸೆ ನೀಡಿದರು. 
ನಮ್ಮ ಕೆಲಸವನ್ನು ಖಾಯಂಗೊಳಿಸುವಂತೆ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದ್ದೇವೆ ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿ ಸದಸ್ಯ ಒಬಳೇಶ್ ಎಂಬುವರು ಹೇಳಿದ್ದಾರೆ.
ನಾವು ಖುದ್ದಾಗಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ತಿಳಿಸಲು ಬಯಸಿದ್ದೇವು, ಆದರೆ ಸಮಯವಕಾಶದಿಂದ ನಮಗೆ ಈ ಅವಕಾಶ ಸಿಗಲಿಲ್ಲ. ಪೌರ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ನೀತಿ ನಿಯಮಗಳು ಕೇವಲ ಕಾಗದದ ಮೇಲಷ್ಟೆ ಇದೆ ಎಂದು ತಿಳಿಸಿದ್ದಾರೆ. 
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನೂ ಗುತ್ತಿಗೆ ಆಧಾರದಲ್ಲೇ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಕೆಲಸವನ್ನು ಕಾಯಂಗೊಳಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT