ಪೌರ ಕಾರ್ಮಿಕರ ಜೊತೆೆ ರಾಹುಲ್ ಗಾಂಧಿ 
ರಾಜಕೀಯ

ಪೌರ ಕಾರ್ಮಿಕರ ಜೊತೆ ಸಂವಾದ: ಶಿಷ್ಟಾಚಾರ ಮುರಿದ ರಾಹುಲ್ ಗಾಂಧಿ

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿಧಾನಸಭೆ ಕ್ಷೇತ್ರ ಗಾಂಧಿನಗರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜೊತೆ...

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿಧಾನಸಭೆ ಕ್ಷೇತ್ರ ಗಾಂಧಿನಗರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜೊತೆ ಸಂವಾದ ನಡೆಸಿದರು, ಸುಮಾರು 15 ನಿಮಿಷಗಳ ಕಾಲ ನಡೆದ ಸಂವಾದದಲ್ಲಿ ರಾಹುಲ್ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.
ಪೌರ ಕಾರ್ಮಿಕರ ಜೊತೆಗಿನ ಸಂವಾದದಲ್ಲಿ ವೇದಿಕೆ ಬಳಿ ತೆರಳದ ರಾಹುಲ್ ಸಭೆ ಅಂತ್ಯವಾಗುವವರೆಗೂ ನಿಂತುಕೊಂಡೇ ಮಾತನಾಡಿದರು.
ರಾಹುಲ್ ಗಾಂಧಿಗೆ ಕೈಕುಲುಕಿದ ಪೌರ ಕಾರ್ಮಿಕರು ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು, ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಬಿಬಿಎಂಪಿ ಮೇಯರ್ ಸಂಪತ್ ಕುಮಾರ್ ಈ ವೇಳೆ ಹಾಜರಿದ್ದರು. 
ಕರ್ನಾಟಕ  ಸರ್ಕಾರ ಮಧ್ಯವರ್ತಿಗಳು ಮತ್ತು ಗುತ್ತಿಗೆದಾರರನ್ನು ದೂರ ಇಡುವ ವ್ಯವಸ್ಥೆ ಮಾಡಿದೆ, ಪೌರ ಕಾರ್ಮಿಕರ ಕೆಲಸವನ್ನು ಕಾಯಂ ಗೊಳಿಸಲಾಗುವುದು ಎಂದು ಭರವಸೆ ನೀಡಿದರು. 
ನಮ್ಮ ಕೆಲಸವನ್ನು ಖಾಯಂಗೊಳಿಸುವಂತೆ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದ್ದೇವೆ ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿ ಸದಸ್ಯ ಒಬಳೇಶ್ ಎಂಬುವರು ಹೇಳಿದ್ದಾರೆ.
ನಾವು ಖುದ್ದಾಗಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ತಿಳಿಸಲು ಬಯಸಿದ್ದೇವು, ಆದರೆ ಸಮಯವಕಾಶದಿಂದ ನಮಗೆ ಈ ಅವಕಾಶ ಸಿಗಲಿಲ್ಲ. ಪೌರ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ನೀತಿ ನಿಯಮಗಳು ಕೇವಲ ಕಾಗದದ ಮೇಲಷ್ಟೆ ಇದೆ ಎಂದು ತಿಳಿಸಿದ್ದಾರೆ. 
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನೂ ಗುತ್ತಿಗೆ ಆಧಾರದಲ್ಲೇ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಕೆಲಸವನ್ನು ಕಾಯಂಗೊಳಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT