ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಟಿಕೆಟ್ ತಮ್ಮ ಕೈ ತಪ್ಪಲು ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಕಾರಣ ಎಂದು ಬಿಜೆಪಿ ನಗರ ವಕ್ತಾರ ಎನ್ .ಆರ್ ರಮೇಶ್ ನೇರ ಆರೋಪ ಮಾಡಿದ್ದಾರೆ.
ಚಿಕ್ಕಪೇಟೆಗೆ ರಮೇಶ್ ಬದಲಾಗಿ ಉದಯ ಗರುಡಚಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಂಘಪರಿವಾರದ ಸದಸ್ಯರು ಸೇರಿದಂತೆ ಹಲವು ಬಿಜೆಪಿ ನಾಯಕರು ನನಗೆ ಟಿಕೆಟ್ ಕೊಡಲು ಬಯಸಿದ್ದರು. ಆದರೆ ಅನಂತ್ ಕುಮಾರ್ ಮತ್ತು ಕೆಲವು ನಾಯಕರು ಇದನ್ನು ತಪ್ಪಿಸಿದ್ದಾರೆ, ಬಿಜೆಪಿಯಲ್ಲಿ ಪ್ರಾಮಾಣಿಕತೆಗೆ ಬೆಲೆಯಿಲ್ಲ, ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
2010ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ರಮೇಶ್, ಸಿದ್ದರಾಮಯ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದರು.
ರಮೇಶ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಸಂಜೆ ಸಭೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಹಲವು ನಾಯಕರು ರಮೇಶ್ ಮನವೊಲಿಸಲು ಯತ್ನಿಸಿದರು. ಅವರು ನನಗೆ ಕೆಲವೊಂದು ಆಯ್ಕೆಗಳನ್ನು ನೀಡಿದ್ದಾರೆ. ಆದರೆ ಅದ್ಯಾವುದು ಮಾಡಲು ಅಸಾಧ್ಯ ಎಂದು ರಮೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos