ಎನ್ ಆರ್ ರಮೇಶ್ 
ರಾಜಕೀಯ

ಪ್ರಾಮಾಣಿಕತೆಗೆ ಬೆಲೆಯಿಲ್ಲ, ಟಿಕೆಟ್ ತಪ್ಪಲು ಅನಂತ್ ಕುಮಾರ್ ಕಾರಣ: ಎನ್ ಆರ್ ರಮೇಶ್ ಆರೋಪ

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ...

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಟಿಕೆಟ್ ತಮ್ಮ ಕೈ ತಪ್ಪಲು ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಕಾರಣ ಎಂದು ಬಿಜೆಪಿ ನಗರ ವಕ್ತಾರ ಎನ್ .ಆರ್ ರಮೇಶ್ ನೇರ ಆರೋಪ ಮಾಡಿದ್ದಾರೆ.
ಚಿಕ್ಕಪೇಟೆಗೆ ರಮೇಶ್ ಬದಲಾಗಿ ಉದಯ ಗರುಡಚಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಂಘಪರಿವಾರದ ಸದಸ್ಯರು ಸೇರಿದಂತೆ ಹಲವು ಬಿಜೆಪಿ ನಾಯಕರು ನನಗೆ ಟಿಕೆಟ್ ಕೊಡಲು ಬಯಸಿದ್ದರು. ಆದರೆ ಅನಂತ್ ಕುಮಾರ್ ಮತ್ತು ಕೆಲವು ನಾಯಕರು ಇದನ್ನು ತಪ್ಪಿಸಿದ್ದಾರೆ, ಬಿಜೆಪಿಯಲ್ಲಿ ಪ್ರಾಮಾಣಿಕತೆಗೆ ಬೆಲೆಯಿಲ್ಲ, ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
2010ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ರಮೇಶ್, ಸಿದ್ದರಾಮಯ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದರು.
ರಮೇಶ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಸಂಜೆ ಸಭೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಹಲವು ನಾಯಕರು ರಮೇಶ್ ಮನವೊಲಿಸಲು ಯತ್ನಿಸಿದರು. ಅವರು ನನಗೆ ಕೆಲವೊಂದು ಆಯ್ಕೆಗಳನ್ನು ನೀಡಿದ್ದಾರೆ. ಆದರೆ ಅದ್ಯಾವುದು ಮಾಡಲು ಅಸಾಧ್ಯ ಎಂದು ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT