ಅನುಪಮಾ ಶೆಣೈ 
ರಾಜಕೀಯ

'ಗೆಲ್ಲುವ ಕನಸು ಕಾಣುತ್ತಿಲ್ಲ, ಸೋಲಬೇಕೆಂಬ ನಿರೀಕ್ಷೆ ಇಲ್ಲ, ಮತದಾರರೇ ಕಿಂಗ್ ಮೇಕರ್ ಗಳು'

ನಾನು ಗೆಲ್ಲುವ ಕನಸು ಕಾಣುತ್ತಿಲ್ಲ, ಅಥವಾ ಸೋಲನ್ನು ನಿರೀಕ್ಷಿಸುತ್ತಿಲ್ಲ, ಪ್ರಜಾಪ್ರಭುತ್ವದಲ್ಲಿ ಏನು ಬೇಕಾದರೂ ಆಗಬಹುದು, ಒಂದು ವೇಳೆ ಸೋತರೆ ಪಕ್ಷವನ್ನು ...

ಬೆಂಗಳೂರು: ನನ್ನ ಇಲಾಖೆಯನ್ನು ನಾನು ಮಿಸ್ ಮಾಡಿಕೊಳ್ಳುತ್ತಿದ್ದೇನೆ, ಆದರೆ ರಾಜಿನಾಮೆ ನೀಡಿದ್ದಕ್ಕೆ ನನಗೆ ಬೇಸರವಿಲ್ಲ, ಭ್ರಷ್ಟಾಚಾರ ಮತ್ತು ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಡಬೇಕು ಅದಕ್ಕಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಅನುಪಮಾ ಶೆಣೈ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.2013ರ ವಿಧಾನಸಭೆ ಚುನಾವಣೆ ವೇಳೆ  ಪ್ರೊಬೆಷನರಿ ಅಧಿಕಾರಿಯಾಗಿದ್ದ ಅನುಪಮಾ ಅವರನ್ನು ಟಿ, ನರಸಿಪುರಕ್ಕೆ ಎಲೆಕ್ಷನ್ ಡ್ಯೂಟಿಗೆ ಹಾಕಲಾಗಿತ್ತು, ಅಂದು ನಾನು ಕರ್ತವ್ಯದಲ್ಲಿದ್ದೆ, ಇಂದು ನಾನೇ ಚುನಾವಣೆಯಲ್ಲಿ ಸ್ಪರ್ದಿಸುತ್ತಿದ್ದೇನೆ, ನನಗೆ ಮಿಶ್ರ ಅನುಭವವಾಗುತ್ತಿದೆ, ನಾನು  ರಾಜಕೀಯಕ್ಕೆ ಸೇರಲು ರಾಜಿನಾಮೆ ನೀಡಬೇಕಿತ್ತು ಅಥವಾ ವಿಆರ್ ಎಸ್ ತೆಗೆದುಕೊಳ್ಳಬೇಕಿತ್ತು, ಆಧರೆ ಆ ಸಮಯ ಇಷ್ಟು ಬೇಗ ಬರುತ್ತದೆ ಎಂದು ನಾನು ಎಣಿಸಿರಲಿಲ್ಲ ಎಂದು ಹೇಳಿದ್ದಾರೆ.
2016 ರಲ್ಲಿ ಕೂಡ್ಲಿಗಿಯಿಂದ ಬಳ್ಳಾರಿಗೆ ವರ್ಗಾವಣೆ ಮಾಡಿದ ನಂತರ ಶೆಣೈ ಬೆಳಕಿಗೆ ಬಂದರು, ಜಿಲ್ಲಾ ಉಸ್ತುವಾರಿ  ಸಚಿವ ಪರಮೇಶ್ವರ್ ನಾಯಕ್ ಅವರ ದೂರವಾಣಿ ಕರೆ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ತಮ್ಮ ವರ್ಗಾವಣೆಯಾಯಿತು ಎಂದ ಅನುಪಮಾ ಆರೋಪಿಸಿದ್ದರು,  ಸಾರ್ವಜನಿಕರ ಪ್ರತಿಭಟನೆಯ ನಂತರ ಅನುಪಮಾ ಅವರ ವರ್ಗಾವಣೆಯನ್ನು ರದ್ದುಗೊಳಿಸಲಾಯಿತು, ಆದರೆ ನಂತರ ಅವರು ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿದರು. 
ನವೆಂಬರ್ 2017 ರಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷವನ್ನು ಘೋಷಿಸಿದರು, ತಮ್ಮ ಪಕ್ಷದಿಂದ 30 ಮಂದಿ ಅಭ್ಯರ್ಥಿಗಳು ಕಣಕ್ಕಿಳಿಯುವುದಾಗಿ ತಿಳಿಸಿದರು. ಉಡುಪಿಯ ಕಾಪು ಕ್ಷೇತ್ರದಿಂದ ಸ್ಪರ್ಥಿಸುತ್ತಿರುವುದಾಗಿ ಹೇಳಿರುವ ಅವರು, ಪಕ್ಷದ ಕೆಲವು ಕಾರ್ಯಕರ್ತರ ಜೊತೆ ಪ್ರಚಾರ ಆರಂಭಿಸುವುದಾಗಿ ತಿಳಿಸಿದ್ದಾರೆ. ಮನೆ ಮನೆಗೆ ತೆರಳಿ ಪ್ರಚಾರ ಮಾಡುವ ಸಾಂಪ್ರದಾಯಿಕ ವಿಧಾನದಲ್ಲಿ ನನಗೆ ಹೆಚ್ಚು ನಂಬಿಕೆಯಿದೆ ಎಂದು ಹೇಳಿದ್ದಾರೆ.
ನನ್ನ ರಾಜಕೀಯ ಜೀವನ ಪ್ರವೇಶಕ್ಕೆ ನನ್ನ ಕುಟುಂಬ ನನ್ನ ಬೆನ್ನೆಲುಬಾಗಿ ನಿಂತಿದೆ. ನನ್ನ ಸಹೋದರ ನನ್ನ ಜೊತೆಗಿದ್ದಾನೆ, ನನ್ನಜೊತೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾನೆ, ಅವರೆಲ್ಲರ ಬೆಂಬಲದಿಂದ ನಾನು ಮತ್ತಷ್ಟು ಸ್ಟ್ರಾಂಗ್ ಅಗಿದ್ದೇನೆ ಎಂದು ಹೇಳಿದ್ದಾರೆ.
ಮತದಾರರೇ ಕಿಂಗ್ ಮೇಕರ್ ಆಗಬೇಕು ಎಂಬುದು ನನ್ನ ಭಾವನೆ, ನೀವು ಗೆಲ್ಲುವ ಸಾಧ್ಯತೆಯಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು 50:50 ಗೆಲ್ಲುವ ಸಾಧ್ಯತೆ ಎಂದು ಹೇಳಿದ್ದಾರೆ. ನಾನು ಗೆಲ್ಲುವ ಕನಸು ಕಾಣುತ್ತಿಲ್ಲ, ಅಥವಾ ಸೋಲನ್ನು ನಿರೀಕ್ಷಿಸುತ್ತಿಲ್ಲ, ಪ್ರಜಾಪ್ರಭುತ್ವದಲ್ಲಿ ಏನು ಬೇಕಾದರೂ ಆಗಬಹುದು, ಒಂದು ವೇಳೆ ಸೋತರೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುತ್ತೇನೆ, ಮುಂದಿನ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.ಇನ್ನೂ ಬಿಹಾರದಲ್ಲೂ ಕೂಡ ತಮಗೆ ಅಹ್ವಾನ ಬಂದಿದೆ ಎಂಗು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT