ಸಾಂದರ್ಭಿಕ ಚಿತ್ರ 
ರಾಜಕೀಯ

ವಿಧಾನಸಭೆ ಚುನಾವಣೆ: ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿರುವ ಎಂಇಎಸ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತನ್ನ ಅಸ್ಥಿತ್ವವನ್ನು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ...

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತನ್ನ ಅಸ್ಥಿತ್ವವನ್ನು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಳಗಾವಿ ಮತ್ತು ಬೀದರ್ ಜಿಲ್ಲೆಯಲ್ಲಿ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೆಲವು ಬಿಜೆಪಿ ನಾಯಕರು ಬೆಂಬಲ ನೀಡಿರುವುದರಿಂದ ಜನರು ಬಿಜೆಪಿಯನ್ನು ವಿರೋಧಿಸಿ ಹಿಂದೂ ಮರಾಠ ಮತ ಗಳಿಕೆಗೆ ಅನುಕೂಲವಾಗಬಹುದು ಎಂಬುದು ಎಂಇಎಸ್ ನಾಯಕರ ಅಭಿಪ್ರಾಯವಾಗಿದೆ.

ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಮಾಜಿ ಶಾಸಕ ಹಾಗೂ ಎಂಇಎಸ್ ನಾಯಕ ಮನೋಹರ್ ಕಿನೆಕರ್, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣ, ಖಾನಾಪುರ, ನಿಪ್ಪಾಣಿ ಕ್ಷೇತ್ರಗಳು ಮತ್ತು ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಔರಾದ್ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.
.
ಏಪ್ರಿಲ್ 15 ಅಥವಾ 16ರ ಹೊತ್ತಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಅದಕ್ಕೂ ಮುನ್ನ ಮಹಾರಾಷ್ಟ್ರ ಏಕೀಕರಣ ಸಮಿತಿಯ ಎಲ್ಲಾ ಘಟಕಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

 ಹಿಂದೂ ಮರಾಠ ಮತಗಳಿಗೆ ಬೆಂಬಲ ಗಳಿಸಿರುವ ಪಕ್ಷ ಆ ಪ್ರದೇಶದಲ್ಲಿ ಪ್ರಮುಖ ರಾಜಕೀಯ ಪ್ರಭಾವ ಹೊಂದಿದೆ. ಆದರೆ ಇತ್ತೀಚೆಗೆ ಹಿಂದೂ ಮತಗಳು ಬಿಜೆಪಿಗೆ ಹಂಚಿಕೆಯಾಗುತ್ತಿರುವುದರಿಂದ ಎಂಇಎಸ್ ಶಾಸಕರ ಸಂಖ್ಯೆ ಎರಡಕ್ಕಿಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT