ವಿಧಾನಸೌಧ 
ರಾಜಕೀಯ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ; ಕಾಂಗ್ರೆಸ್ ಏಕೈಕ ಅತಿ ದೊಡ್ಡ ಪಕ್ಷ: ಮತದಾನ ಪೂರ್ವ ಸಮೀಕ್ಷೆ

ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಮುಂದಿನ ತಿಂಗಳು ನಡೆಯುವ ವಿಧಾನಸಭಾ....

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಇಂಡಿಯಾ ಟುಡೇ ಮತ್ತು ಕಾರ್ವಿ ಇನ್ ಸೈಟ್ಸ್‌ ಜಂಟಿಯಾಗಿ ನಡೆಸಿದ ಮತದಾನ ಪೂರ್ವ ಸಮೀಕ್ಷೆ ಹೇಳಿದೆ.
ಆಡಳಿತಾರೂಢ ಕಾಂಗ್ರೆಸ್ ಸಾಕಷ್ಟು ಸಂಖ್ಯೆಯಲ್ಲಿ ಸ್ಥಾನ ಕಳೆದುಕೊಳ್ಳಲಿದ್ದು, 224 ಕ್ಷೇತ್ರಗಳ ಪೈಕಿ 90 ರಿಂದ 101 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. 
ಪ್ರಮುಖ ಪ್ರತಿಪಕ್ಷ ಬಿಜೆಪಿ 78ರಿಂದ 86 ಸ್ಥಾನಗಳನ್ನು ಪಡೆಯಲಿದ್ದು, ಜೆಡಿಎಸ್ 34ರಿಂದ 43 ಸ್ಥಾನಗಳನ್ನು ಪಡೆಯುವ ಮೂಲಕ ಕಿಂಗ್ ಮೇಕರ್ ಆಗಲಿದೆ ಎಂದು ಸಮೀಕ್ಷೆ ಮತದಾನ ಪೂರ್ವ ಸಮೀಕ್ಷೆ ತಿಳಿಸಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಸರಳ ಬಹುಮತಕ್ಕಾಗಿ ಯಾವುದೇ ಒಂದು ಪಕ್ಷ 112 ಸ್ಥಾನಗಳನ್ನು ಗೆಲ್ಲಬೇಕಿದೆ.
ಮತ ಹಂಚಿಕೆ ಪ್ರಕಾರ ಹೇಳುವುದಾದರೆ ಕಾಂಗ್ರೆಸ್‌ ಶೇ.37ರಷ್ಟು ಮತಗಳನ್ನು ಗಳಿಸಲಿದೆ. ಬಿಜೆಪಿಗೆ ಶೇ.35 ರಷ್ಟು ಮತಗಳು ದಕ್ಕಲಿವೆ. ಜೆಡಿಎಸ್‌-ಬಿಎಸ್‌ಪಿ ಗೆ ಒಟ್ಟಾರೆಯಾಗಿ ಶೇ.19ರಷ್ಟು ಮತಗಳು ಪ್ರಾಪ್ತವಾಗಲಿವೆ. 
ಅತಂತ್ರ ಸ್ಥಿತಿ ನಿರ್ಮಾಣವಾದರೆ ಅತ್ಯಂತ ಹಳೆಯ ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಬೆಂಬಲ ಕೊಡಬೇಕು ಎಂದು ಶೇ.39 ರಷ್ಟು ಜನ ಬಯಸಿದ್ದು, ಬಿಜೆಪಿಗೆ ಜೆಡಿಎಸ್‌ ಬೆಂಬಲ ಕೊಡಬೇಕು ಎಂದು ಶೇ.29ರಷ್ಟು ಮಂದಿ ಬಯಸುತ್ತಾರೆ ಎನ್ನುವುದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಇಂಡಿಯಾ ಟುಡೆ ಮತ್ತು ಕಾರ್ವಿ ಇನ್‌ಸೈಟ್ಸ್‌  ಈ ಮತದಾನ ಪೂರ್ವ ಸಮೀಕ್ಷೆಗಾಗಿ ರಾಜ್ಯಾದ್ಯಂತದ 224 ವಿಧಾನಸಭಾ ಕ್ಷೇತ್ರಗಳ 27,919 ಮಂದಿಯನ್ನು ಸಂದರ್ಶಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 15ರಂದು ಫ‌ಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT