ವಿಧಾನಸೌಧ 
ರಾಜಕೀಯ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ; ಕಾಂಗ್ರೆಸ್ ಏಕೈಕ ಅತಿ ದೊಡ್ಡ ಪಕ್ಷ: ಮತದಾನ ಪೂರ್ವ ಸಮೀಕ್ಷೆ

ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಮುಂದಿನ ತಿಂಗಳು ನಡೆಯುವ ವಿಧಾನಸಭಾ....

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಇಂಡಿಯಾ ಟುಡೇ ಮತ್ತು ಕಾರ್ವಿ ಇನ್ ಸೈಟ್ಸ್‌ ಜಂಟಿಯಾಗಿ ನಡೆಸಿದ ಮತದಾನ ಪೂರ್ವ ಸಮೀಕ್ಷೆ ಹೇಳಿದೆ.
ಆಡಳಿತಾರೂಢ ಕಾಂಗ್ರೆಸ್ ಸಾಕಷ್ಟು ಸಂಖ್ಯೆಯಲ್ಲಿ ಸ್ಥಾನ ಕಳೆದುಕೊಳ್ಳಲಿದ್ದು, 224 ಕ್ಷೇತ್ರಗಳ ಪೈಕಿ 90 ರಿಂದ 101 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. 
ಪ್ರಮುಖ ಪ್ರತಿಪಕ್ಷ ಬಿಜೆಪಿ 78ರಿಂದ 86 ಸ್ಥಾನಗಳನ್ನು ಪಡೆಯಲಿದ್ದು, ಜೆಡಿಎಸ್ 34ರಿಂದ 43 ಸ್ಥಾನಗಳನ್ನು ಪಡೆಯುವ ಮೂಲಕ ಕಿಂಗ್ ಮೇಕರ್ ಆಗಲಿದೆ ಎಂದು ಸಮೀಕ್ಷೆ ಮತದಾನ ಪೂರ್ವ ಸಮೀಕ್ಷೆ ತಿಳಿಸಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಸರಳ ಬಹುಮತಕ್ಕಾಗಿ ಯಾವುದೇ ಒಂದು ಪಕ್ಷ 112 ಸ್ಥಾನಗಳನ್ನು ಗೆಲ್ಲಬೇಕಿದೆ.
ಮತ ಹಂಚಿಕೆ ಪ್ರಕಾರ ಹೇಳುವುದಾದರೆ ಕಾಂಗ್ರೆಸ್‌ ಶೇ.37ರಷ್ಟು ಮತಗಳನ್ನು ಗಳಿಸಲಿದೆ. ಬಿಜೆಪಿಗೆ ಶೇ.35 ರಷ್ಟು ಮತಗಳು ದಕ್ಕಲಿವೆ. ಜೆಡಿಎಸ್‌-ಬಿಎಸ್‌ಪಿ ಗೆ ಒಟ್ಟಾರೆಯಾಗಿ ಶೇ.19ರಷ್ಟು ಮತಗಳು ಪ್ರಾಪ್ತವಾಗಲಿವೆ. 
ಅತಂತ್ರ ಸ್ಥಿತಿ ನಿರ್ಮಾಣವಾದರೆ ಅತ್ಯಂತ ಹಳೆಯ ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಬೆಂಬಲ ಕೊಡಬೇಕು ಎಂದು ಶೇ.39 ರಷ್ಟು ಜನ ಬಯಸಿದ್ದು, ಬಿಜೆಪಿಗೆ ಜೆಡಿಎಸ್‌ ಬೆಂಬಲ ಕೊಡಬೇಕು ಎಂದು ಶೇ.29ರಷ್ಟು ಮಂದಿ ಬಯಸುತ್ತಾರೆ ಎನ್ನುವುದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಇಂಡಿಯಾ ಟುಡೆ ಮತ್ತು ಕಾರ್ವಿ ಇನ್‌ಸೈಟ್ಸ್‌  ಈ ಮತದಾನ ಪೂರ್ವ ಸಮೀಕ್ಷೆಗಾಗಿ ರಾಜ್ಯಾದ್ಯಂತದ 224 ವಿಧಾನಸಭಾ ಕ್ಷೇತ್ರಗಳ 27,919 ಮಂದಿಯನ್ನು ಸಂದರ್ಶಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 15ರಂದು ಫ‌ಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT