ಸಿದ್ದರಾಮಯ್ಯ ಮತ್ತು ಜಿ.ಟಿ ದೇವೇಗೌಡ 
ರಾಜಕೀಯ

'ಚಾಮುಂಡೇಶ್ವರಿ'ಯಲ್ಲಿ ಒಗ್ಗಟ್ಟಾದ ವಿರೋಧ ಪಕ್ಷಗಳು: ಕಾಂಗ್ರೆಸ್ ನಲ್ಲಿ ಮನೆಮಾಡಿದ ಆತಂಕ

ಜೆಡಿಎಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಜಿ,ಟಿ ದೇವೇಗೌಡ ಪ್ರಬಲ ಅಭ್ಯರ್ಥಿಯಾಗಿದ್ದಾರೆ, ಜೊತೆಗೆ ಎಚ್.ಡಿ ದೇವೇಗೌಡ ಮತ್ತು ಎಚ್.ಡಿ ಕುಮಾರ ಸ್ವಾಮಿ ಅವರು ಜಿ.ಟಿ ದೇವೇಗೌಡ ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಾಗಿರುವುದು ಕಾಂಗ್ರೆಸ್ ಗೆ ಆತಂಕ ಉಂಟು ಮಾಡಿದೆ.
ಜೆಡಿಎಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಜಿ,ಟಿ ದೇವೇಗೌಡ  ಪ್ರಬಲ ಅಭ್ಯರ್ಥಿಯಾಗಿದ್ದಾರೆ, ಜೊತೆಗೆ ಎಚ್.ಡಿ ದೇವೇಗೌಡ ಮತ್ತು ಎಚ್.ಡಿ ಕುಮಾರ ಸ್ವಾಮಿ ಅವರು ಜಿ.ಟಿ ದೇವೇಗೌಡ ಬೆನ್ನಿಗೆ ನಿಂತಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ ತೆರೆಮರೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತಿದೆ. ಒಂದು ವೇಳೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದರೇ , ಚಾಮುಂಡೇಶ್ವರಿಯಿಂದ ಸಿದ್ದರಾಮಯ್ಯ ಅವರನ್ನು ಹಿಮ್ಮೆಟ್ಟಿಸಲು ವಿರೋಧ ಪಕ್ಷಗಳು ರಣ ತಂತ್ರ ಹೂಡಿವೆ. 
ಸಿದ್ದರಾಮಯ್ಯ ಅವರ ಈ ನಿಲುವು ಹಳೇ ಮೈಸೂರು ಭಾಗದ ಮತದಾರರಿಗೆ ತಪ್ಪು ಸಂದೇಶ ಸಾರುವ ಸಾದ್ಯತೆಗಳಿವೆ. ಜೊತೆಗೆ ಪಕ್ಷದ ಪ್ರಾಬಲ್ಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಂಭವವಿದೆ. 
ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗುರುವಾರ ಪಕ್ಷದ ಹೈಕಮಾಂಡ್ ಭೇಟಿ ಮಾಡಿ, ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡಿಕೊಂಡು ದೆಹಲಿಯಿಂದ ತೆರಳಿದ್ದಾರೆ, ಈ ವಾರದ ಅಂತ್ಯದೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.ಟಿಕೆಟ್ ಆಕಾಂಕ್ಷಿಗಳು ಅಂತಿಮ ಕ್ಷಣದಲ್ಲಿ ಲಾಬಿ ಮಾಡಲು ಸಿಎಂ ಸಿದ್ದರಾಮಯ್ಯ ಅವರ ಮನೆ ಮುಂದೆ ಕಾದು ಕುಳಿತಿದ್ದಾರೆ.
ಲೋಕೋಪಯೋಗಿ ಸಚಿವ ಎಚ್,ಸಿ ಮಹಾದೇವಪ್ಪ ತಮ್ಮ ಪುತ್ರನಿಗಾಗಿ ಟಿಕೆಟ್ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಜಮೀರ್ ಅಹಮದ್ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಟಿಕೆಟ್ ಆಕಾಂಕ್ಷಿಗಳು ಸಿಎಂ ನಿವಾಸದೆದರು ಬೀಡು ಬಿಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT