ಪ್ರಕಾಶ್ ರೈ 
ರಾಜಕೀಯ

ಕರ್ನಾಟಕದಿಂದಲೇ ಬಿಜೆಪಿ ಅಂತ್ಯದ ಕೌಂಟ್ ಡೌನ್ ಆರಂಭ: ಶಾ ವಿರುದ್ಧ ಪ್ರಕಾಶ್ ರೈ ವಾಗ್ದಾಳಿ

ಮುನುಷ್ಯರನ್ನು ನಾಯಿ, ಹಾವು ಚೇಳುಗಳಿಗೆ ಹೋಲಿಸುವ ಅಮಿತ್ ಶಾ, ವಿರೋಧ ಪಕ್ಷಗಳ ಭಯದಿಂದಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಪ್ರಚಾರ ...

ವಿಜಯಾಪುರ: ರಾಜ್ಯದಲ್ಲಿ  ಕೋಮುವಾದಿಗಳ ಆಳ್ವಿಕೆ ಬರಬಾರದು ಎಂದು ನಾಡಿನ ಜನರಿಗೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಳಿಕೊಳ್ಳುವೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ವಿಜಯಾಪುರದಲ್ಲಿ ಜಸ್ಟ್ ಆಸ್ಕಿಂಗ್ ಫೌಂಡೇಶನ್ ಉದ್ಘಾಟಿಸಿ ಮಾತನಾಡಿದ ಅವರು, ನಾನು ಯಾವುದೇ ಪಕ್ಷದ ಏಜೆಂಟ್‌ ಅಲ್ಲ. ರಾಜ್ಯದಲ್ಲಿ ರಾಕ್ಷಸರ ಆಳ್ವಿಕೆ ಬರಬಾರದು ಎಂದು ನಾಡಿನ ಜನರಿಗೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಳಿಕೊಳ್ಳುವುದಾಗಿ ತಿಳಿಸಿದರು. 
ಕರ್ನಾಟಕದಿಂದಲೇ ಬಿಜೆಪಿಯ ಕೌಂಟ್‌ಡೌನ್‌ ಶುರುವಾಗಲಿದೆ. ಉತ್ತರ ಭಾರತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನರ ಅಸಹನೆ ಹೆಚ್ಚಿದೆ. 2019ರ ಲೋಕಸಭಾ ಚುನಾವಣೆಯಲ್ಲೇ ಇದರ ಫಲಿತಾಂಶ ದೊರಕಲಿದೆ ಎಂದು ಹೇಳಿದ್ದಾರೆ, 
‘ನಾನು ಹಿಂದೂ ವಿರೋಧಿಯಲ್ಲ. ಮನುಷ್ಯರನ್ನು ಪ್ರಾಣಿಗಳಿಗೆ ಹೋಲಿಸುತ್ತಿದ್ದಾರೆ, ಅವರು ತಮ್ಮ ಪ್ರಜ್ಞೆಯನ್ನು ಕಳೆದುಕೊಂಡಿದ್ದಾರೆ, ಹೇಳಿಕೆನೀಡುವಾಗ ಎಚ್ಚರದಿಂದ ನೀಡಬೇಕು, ವಿರಧ ಪಕ್ಷಗಳಿಗೆ ಗೌರವ ನೀಡಬೇಕು ಎಂದು ಅಮಿತ್ ಶಾಗೆ ಸಲಹೆ ನೀಡಿದ್ದಾರೆ.
ಮುನುಷ್ಯರನ್ನು ನಾಯಿ, ಹಾವು ಚೇಳುಗಳಿಗೆ ಹೋಲಿಸುವ ಅಮಿತ್ ಶಾ, ವಿರೋಧ ಪಕ್ಷಗಳ ಭಯದಿಂದಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. 
ಕಾವೇರಿ ನದಿ ಪಾತ್ರದಲ್ಲಿ ರಿಯಲ್ ಎಸ್ಟೇಟ್, ಅಕ್ರಮ ಮರಳು ಮಾಫಿಯಾ ನಡೆದಿದೆ. ರಾಜಕಾರಣಿಗಳು ಆ ಬಗ್ಗೆ ಮಾತನಾಡುವುದಿಲ್ಲ. ನಮ್ಮ ಫೌಂಡೇಶನ್‍ನಿಂದ ಕಾವೇರಿ ಸಮಸ್ಯೆ ಬಗ್ಗೆ ವಿವರವಾದ ವರದಿ ತಯಾರಿಸಿ ಜನರ ಎದುರಿಗಿಡುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT