ಸಂಗ್ರಹ ಚಿತ್ರ 
ರಾಜಕೀಯ

ಮತಯಾಚನೆಗೆ ಬಂದ ಅಭ್ಯರ್ಥಿಗೆ 500 ರು. ನೀಡಿದ ಮತದಾರ!

ಮೇ 12ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿದ್ದಾರೆ...

ಅಂಕೋಲಾ: ಮೇ 12ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಇನ್ನು ಮತದಾರರಿಗೆ ಅಭ್ಯರ್ಥಿಗಳು ಹಣದ ಆಮಿಷವೊಡ್ಡುವುದು ಸಾಮಾನ್ಯ ಆದರೆ ಅಂಕೋಲದಲ್ಲಿ ಮತಯಾಚನೆಗೆ ಬಂದ ಅಭ್ಯರ್ಥಿಗೆ ಮತದಾರರೊಬ್ಬರು 500 ರುಪಾಯಿ ನೀಡಿ ಗಮನ ಸೆಳೆದಿದ್ದಾರೆ. 
ಅಂಕೋಲಾದ ಲಕ್ಷ್ಮೀಶ್ವರ ನಗರ ನಿವಾಸಿ ಪ್ರಕಾಶ್ ನಾಯ್ಕ್ ಎಂಬುವರು ಮನೆಗೆ ಮತ ಕೇಳಲು ಬಂದ ಮಾಜಿ ಸಚಿವ ಕಾರವಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಅವರಿಗೆ 500 ರುಪಾಯಿ ನೀಡಿ ನಿಮಗೆ ಮತ ಹಾಕುತ್ತೇನೆ ಎಂದು ಹೇಳಿದ್ದಾರೆ. 
ಚುನಾವಣೆಗಳು ಬಂದಾಗ ರಾಜಕಾರಣಿಗಳು ಜನರಿಗೆ ಹಣ ನೀಡುತ್ತಾರೆ ಆ ಪ್ರಕ್ರಿಯೆ ನಿಲ್ಲಬೇಕು ಹೀಗಾಗಿ ನಾನು ಅಭ್ಯರ್ಥಿಗೆ ನಾನು ದುಡಿದ ಹಣ ನೀಡಿದ್ದೇನೆ ಎಂದು ಹೇಳಿದ್ದಾರೆ. 
ಕಾರವಾರದಲ್ಲಿ ಈ ಬಾರಿ ಬಿಜೆಪಿಯಿಂದ ರೂಪಾಲಿ ನಾಯ್ಕ್, ಕಾಂಗ್ರೆಸ್ ನಿಂದ ಹಾಲಿ ಶಾಸಕ ಸತೀಶ್ ಸೈಲ್ ಮತ್ತು ಆನಂದ್ ಅಸ್ನೋಟಿಕರ್ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT