ಸಂಗ್ರಹ ಚಿತ್ರ 
ರಾಜಕೀಯ

218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಈ ಪೈಕಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ (ವರುಣಾ ಕ್ಷೇತ್ರ), ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯರೆಡ್ಡಿ (ಜಯನಗರ), ಮಂಡ್ಯದಿಂದ ನಟ ಅಂಬರೀಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಳಿದಂತೆ ಯಮಕನ ಮರಡಿ ಕ್ಷೇತ್ರದಿಂದ   ಸತೀಶ್ ಜಾರಕಿ ಹೊಳಿ, ಖಾನಾಪುರದಿಂದ ಅಂಜಲಿ ನಿಂಬಾಳ್ಕರ್, ತೆರದಾಳ ದಿಂದ ಉಮಾಶ್ರೀ, ಮುದ್ದೇ ಬಿಹಾಳದಿಂದ ಅಪ್ಪಾಜಿ ನಾಡಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಕೊರಟಗೆರೆಯಿಂದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಬಾದಾಮಿ ಯಿಂದ ದೇವರಾಜ್ ಪಾಟೀಲ್, ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ಜೇವರ್ಗಿಯಿಂದ ಅಜಯ್ ಸಿಂಗ್, ಗಂಗಾವತಿಯಿಂದ ಇಕ್ಬಾಲ್ ಅನ್ಸಾರಿ, ಧಾರವಾಡದಲ್ಲಿ ವಿನಯ್ ಕುಲಕರ್ಣಿ, ಹಳಿಯಾಳದಿಂದ ಆರ್ ವಿ ದೇಶಪಾಂಡೆ, ಕಾರವಾರದಲ್ಲಿ ಸತೀಶ್ ಸೈಲ್, ಹಿರೇಕೆರೂರು ನಲ್ಲಿ ಬಿಸಿ ಪಾಟೀಲ್, ಹಡಗಲಿಯಿಂದ ಪಿಟಿ ಪರಮೇಶ್ವರ್ ನಾಯ್ಕ್ ಟಿಕೆಟ್ ಪಡೆದಿದ್ದಾರೆ.
ಅಂತೆಯೇ ಬಳ್ಳಾರಿಯಿಂದ ಅನಿಲ್ ಲಾಡ್ಸ, ಹೊಳಲ್ಕರೆಯಿಂದ ಹೆಚ್ ಆಂಜನೇಯ, ದಾವಣಗೆರೆ ಉತ್ತರ ಕ್ಷೇತ್ರದಿಂದ ಹೆಚ್ ಹೆಚ್ ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕ್ಷೇತ್ರದಿಂ ಶ್ಯಾಮನೂರು ಶಿವಶಂಕರಪ್ಪ, ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಬ್ಯಾಟರಾಯನಪುರ ಕ್ಷೇತ್ರದಿಂದ ಕೃಷ್ಣ ಬೈರೇಗೌಡ, ಆರ್ ಆರ್ ನಗರದಲ್ಲಿ ಮುನಿರತ್ನ, ಕೋಲಾರದಲ್ಲಿ ಸೈಯ್ಯದ್ ಜಮೀರ್ ಪಾಷಾ ಅವರಿಗೆ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT