ಸಂಗ್ರಹ ಚಿತ್ರ 
ರಾಜಕೀಯ

ಜೆಡಿಎಸ್ ರೆಬೆಲ್ ಶಾಸಕರಿಗೆ ಕೈ ಟಿಕೆಟ್, ದಾವಣಗೆರೆ ದಕ್ಷಿಣದಲ್ಲಿ ಶ್ಯಾಮನೂರು ಶಿವಶಂಕರಪ್ಪಗೆ ಟಿಕೆಟ್

ನಿರೀಕ್ಷೆಯಂತೆಯೇ ಜೆಡಿಎಸ್ ಪಕ್ಷದ ರೆಬೆಲ್ ಶಾಸಕರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡಿದ್ದು, ದಾವಣಗೆರೆ ದಕ್ಷಿಣದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು: ನಿರೀಕ್ಷೆಯಂತೆಯೇ ಜೆಡಿಎಸ್ ಪಕ್ಷದ ರೆಬೆಲ್ ಶಾಸಕರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡಿದ್ದು, ದಾವಣಗೆರೆ ದಕ್ಷಿಣದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಟಿಕೆಟ್ ಪಡೆದಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ರಂಗೇರಿದ್ದು, ನಿರೀಕ್ಷೆಯಂತೆಯೇ ಜೆಡಿಎಸ್ ನ ರೆಬೆಲ್ ಶಾಸಕರಿಗೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ. ಚಾಮರಾಜಪೇಟೆ ಕ್ಷೇತ್ರದಿಂದ ಮಾಜಿ ಶಾಸಕ ಜಮೀರ್ ಅಹ್ಮದ್ ಖಾನ್, ಮಾಗಡಿಯಿಂದ ಹೆಚ್ ಸಿ ಬಾಲಕೃಷ್ಣ ಮತ್ತು ನಾಗಮಂಗಲ ಕ್ಷೇತ್ರದಿಂದ ಚೆಲುವರಾಯಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.
ಅಂತೆಯೇ ತೀವ್ರ ವಿರೋಧದ ನಡುವೆಯೇ ಬೀದರ್ ದಕ್ಷಿಣ ಕ್ಷೇತ್ರದಿಂದ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ವಯಸ್ಸಿನ ಆಧಾರದ ಮೇಲೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಲಾಗುವುದಿಲ್ಲ ಎಂದು ಹೇಳಲಾಗಿತ್ತಾದರೂ, ಕೊನೆ ಕ್ಷಣದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನು ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕೋಲಾರ ಕ್ಷೇತ್ರದಲ್ಲಿ ಸೈಯದ್ ಜಮೀರ್ ಪಾಷಾ ಅವರಿಗೆ ಟಿಕೆಟ್ ನೀಡಲಾಗಿದೆ. ಕೋಲಾರ ಕ್ಷೇತ್ರದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿಆರ್ ಸುದರ್ಶನ್ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟೆಕಿಟ್ ಕೈ ತಪ್ಪಿದ್ದಕ್ಕೆ ಸುದರ್ಶನ್ ತಮ್ಮ ಸ್ಥಾನಕ್ಕೆ ನಿನ್ನೆಯಷ್ಟೇ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT