ಕೋಲಾರ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ, ಅವರ ಸಹೋದರ ಎಚ್.ಡಿ ರೇವಣ್ಣ ಹೊಳೆ ನರಸಿಪುರದಿಂದ ಸ್ಪರ್ಧಿಸುತ್ತಿದ್ದು ತವರು ಜಿಲ್ಲೆ ಹಾಸನದಲ್ಲಿ ರಣತಂತ್ರ ರೂಪಿಸುತ್ತಿದ್ದಾರೆ, ಈ ನಡುವೆ ಅವರ ಮತ್ತೊಬ್ಬ ಸಹೋದರ ರಮೇಶ್ ಗೌಡ ಕೋಲಾರದಲ್ಲಿ ಸದ್ದಿಲ್ಲದೇ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ.
ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್,ಡಿ ದೇವೇಗೌಡ ಅವರ 4ನೇ ಮಗನವಾಗಿರುವ ರಮೇಶ್ ಗೌಡ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯಿಸಲಾಗಿತ್ತು, ಆದರೆ ಅದಕ್ಕೆ ಸೊಪ್ಪು ಹಾಕದ ರಮೇಶ್ ಗೌಡ ಜಿಲ್ಲೆಯಲ್ಲಿ ಉಂಟಾಗಿರುವ ಅಸಮಾಧಾನವನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತಿದ್ದಾರೆ.
ಜಿಲ್ಲೆಯ ಪ್ರಮುಖ ನಾಯಕರ ಜೊತೆ ಸಭೆ ನಡೆಸಿದ ರಮೇಶ್ ಗೌಡ ಟಿಕೆಟ್ ವಂಚಿತರಾಗಿರುವ ಮಾಜಿ ಕೃಷಿ ಸಚಿವ ಕೆ. ಶ್ರೀನಿವಾಸ ಗೌಡ ಅವರ ಮನವೊಲಿಕೆಗೆ ಯತ್ನಿಸಿದರು. ಈ ವೇಳೆ ಜೆಡಿಎಸ್ ಉಸ್ತುವಾರಿ ಕಾರ್ಯದರ್ಶಿ ಗೋಪಾಲ ಕೃಷ್ಣ ಅವರು ಉಪಸ್ಥಿತರಿದ್ದರು
ಕೋಲಾರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸಮರ್ಥ ಪೈಪೋಟಿ ನೀಡಿ ಜಯ ಗಳಿಸಬೇಕು ಎಂದು ಪಕ್ಷದ ಮುಖಂಡರುಗಳಿಗೆ ಕರೆ ನೀಡಿದ್ದಾರೆ, ಜಿಲ್ಲೆಯಲ್ಲಿ ಸಮರ್ಥ ನಾಯಕತ್ವದ ಕೊರತೆಯಿದೆ, ಎಲ್ಲಾ ಕಾರ್ಯಕರ್ತನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಲ್ಲಿ ಆತ್ನಸ್ಥೈರ್ಯ ಹೆಚ್ಚಿಸಿ ಪಕ್ಷದ ಗೆಲುವು ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಆರು ಕ್ಷೇತ್ರಗಳಿಗೆ ಭೇಟಿ ನೀಡುವಂತೆ ದೇವೇಗೌಡರು ರಮೇಶ್ ಗೌಡ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ,
ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಕೆ. ಶ್ರೀನಿವಾಸ ಗೌಡ ಅವರಿಗೆ ಟಿಕೆಟ್ ನೀಡಿಲ್ಲ, ಇದರಿಂದ ಶ್ರೀನಿವಾಸ ಗೌಡ ಅಸಮಾಧಾನ ಹೊಂದಿದ್ದು, ಕಾಂಗ್ರೆಸ್ ಸೇರುವುದಾಗಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos