ಅನುಪಮಾ ಶೆಣೈ 
ರಾಜಕೀಯ

ರಾಜಕಾರಣಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ತರಲು ರಾಜಕೀಯ ಪ್ರವೇಶ: ಅನುಪಮಾ ಶೆಣೈ

ಭರವಸೆ ನೀಡಿ ಈಡೇರಿಸದ ರಾಜಕಾರಣಿಗಳಲ್ಲಿ ಶಿಸ್ತು ಮತ್ತು ಪ್ರಾಮಾಣಿಕತೆ ತರಲು ನಾನು ರಾಜಕೀಯ...

ಬೆಂಗಳೂರು: ಭರವಸೆ ನೀಡಿ ಈಡೇರಿಸದ ರಾಜಕಾರಣಿಗಳಲ್ಲಿ ಶಿಸ್ತು ಮತ್ತು ಪ್ರಾಮಾಣಿಕತೆ ತರಲು ನಾನು ರಾಜಕೀಯ ಪ್ರವೇಶಿಸಿದ್ದೇನೆ ಎಂದು ಮಾಜಿ ಪೊಲೀಸ್ ಅಧಿಕಾರಿ ಹಾಗೂ ಭಾರತೀಯ ಜನಶಕ್ತಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅನುಪಮಾ ಶೆಣೈ ಅವರು ಮಂಗಳವಾರ ಹೇಳಿದ್ದಾರೆ.
ಮೇ 12ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕಾಗಿಯೇ ನಾನು ರಾಜಕೀಯ ಪಕ್ಷ ಸ್ಥಾಪಿಸಿದ್ದೇನೆ ಎಂದು ಅನುಪಮಾ ಶೆಣೈ ಅವರು ಐಎಎನ್ ಎಸ್ ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 
ರಾಜ್ಯದಲ್ಲಿ ಹೊಸ ನಾಯಕತ್ವ ಸೃಷ್ಟಿಸುವುದಕ್ಕಾಗಿ ನಾನು ರಾಜಕೀಯ ಪ್ರವೇಶಿಸಿದ್ದೇನೆ. ರಾಜ್ಯದ ಮೂರು ರಾಜಕೀಯ ಪಕ್ಷಗಳಲ್ಲಿ ಯುವಕರಿಗೆ ಬೆಳೆಯಲು ಯಾವುದೇ ಅವಕಾಶ ಇಲ್ಲ. ನಮ್ಮ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತ ನೀಡಲಾಗುವುದು ಎಂದಿದ್ದಾರೆ.
ನಮ್ಮ ಪಕ್ಷ ರಾಜ್ಯದ 30 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಬೆಂಗಳೂರಿನ ಏಳು-ಎಂಟು ಕ್ಷೇತ್ರಗಳಲ್ಲಿ, ವಿಜಯಪುರದ ಮೂರು ಕ್ಷೇತ್ರಗಳಲ್ಲಿ, ಬಾಗಲಕೋಟೆ, ಕಲಬುರ್ಗಿ, ಮೈಸೂರು ಮತ್ತು ಉಡುಪಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಹಾಗೂ ಇತರೆ ಜಿಲ್ಲೆಗಳಲ್ಲೂ ಭಾರತೀಯ ಜನಶಕ್ತಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಅನುಪಮಾ ಹೇಳಿದ್ದಾರೆ.
ನಾನು ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾಜಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಮೇ 12ರಂದು ಮತದಾನ ನಡೆಯಲಿದ್ದು, ಮೇ 15ಕ್ಕೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT