ಸಾಂದರ್ಭಿಕ ಚಿತ್ರ 
ರಾಜಕೀಯ

ನೀತಿ ಸಂಹಿತೆಯಿಂದ ಮದ್ಯಕ್ಕೆ ಬರ: ಮದುವೆ, ಸಮಾರಂಭಗಳಿಂದ ರಾಜಕಾರಣಿಗಳು ದೂರ!

ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಅದರಲ್ಲೂ ಅಭ್ಯರ್ಥಿಗಳು ಮದುವೆ, ಹುಟ್ಟುಹಬ್ಬ ಸೇರಿದಂತೆ ಯಾವುದೇ ಸಮಾರಂಭಗಳನ್ನು...

ಮಂಗಳೂರು: ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಅದರಲ್ಲೂ ಅಭ್ಯರ್ಥಿಗಳು ಮದುವೆ, ಹುಟ್ಟುಹಬ್ಬ ಸೇರಿದಂತೆ ಯಾವುದೇ ಸಮಾರಂಭಗಳನ್ನು ಮಿಸ್ ಮಾಡಿಕೊಳ್ಳಲು ಬಯಸುವುದಿಲ್ಲ, ಏಕೆಂದರೇ ಅಲ್ಲಿ ಮತದಾರರನ್ನು ಅವರು ಭೇಟಿಯಾಗಿ ಮತ ಯಾಚನೆ ಮಾಡಬಹುದಾಗಿದೆ. 
ಆದರೆ ಈ ಬಾರಿ ಅಭ್ಯರ್ಥಿಗಳು ಯಾವುದೇ ಮದುವೆ ಕಾರ್ಯಕ್ರಮ ಹಾಗೂ ಸಮಾರಂಭಗಳಿಗೆ ರಾಜಕಾರಣಿಗಳು ಹಾಜರಾಗುತ್ತಿಲ್ಲ, ಸಮಾರಂಭಗಳಲ್ಲಿ ಮತಕ್ಕಾಗಿ ಅಭ್ಯರ್ಥಿಗಳು ಲಂಚ, ಉಡುಗೊರೆ ಆಮೀಷ ಒಡ್ಡುತ್ತಾರೆಂಬ ಕಾರಣಕ್ಕಾಗಿ ಆಯೋಗ ನಡೆಯುವ ಪ್ರತಿಯೊಂದು ಸಮಾರಂಭದ ಮೇಲೂ ಹದ್ದಿನ ಕಣ್ಣಿಟ್ಟಿದೆ. ಹೀಗಾಗಿ ಸಭೆ ಸಮಾರಂಭಗಳ ಆಯೋಜಕರು ರಾಜಕಾರಣಿಗಳನ್ನು ಆಹ್ವಾನಿಸುವ ಗೋಜಿಗೆ ಹೋಗುತ್ತಿಲ್ಲ,
ರಾಜಕಾರಣಿಗಳು ಹಾಜರಾಗಿದ್ದ ಕೆಲವು ಸಮಾರಂಭಗಳಲ್ಲಿ ಹೆಚ್ಚುವರಿ ಮಧ್ಯ ಹಾಗೂ ಉಡುಗೊರೆಗಳು ಇದ್ದು, ಅವುಗಳು ಪರಿಶೀಲನೆಗೊಳಪಡಿಸಲಾಯಿತು ಎಂಬ ಮಾತುಗಳು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೇಳಿ ಬರುತ್ತಿವೆ.
ಉಡುಪಿ ಜಿಲ್ಲೆಯ ಪಲಿಮಾರು  ಗ್ರಾಮದ ನಿವಾಸಿಯೊಬ್ಬರ ಮದುವೆ ಸಮಾರಂಭವಿದೆ, ಅಲ್ಲಿನ  ಸ್ಥಳೀಯ ರಾಜಕಾರಣಿ ಈ ಕುಟುಂಬದ ಆಪ್ತರು, 1 ತಿಂಗಳ ಹಿಂದೆ ಆ ರಾಜಕಾರಣಿಗೆ ಆಹ್ವಾನ ಪತ್ರಿಕೆ ನೀಡಲಾಗಿತ್ತು, ಮದುವೆಯ ದಿನ ಹತ್ತಿರವಾಗುತ್ತಿರುವಂತೆ ಜ್ಞಾಪಿಸಲು ಅವರು ಹೇಳಿದ್ದರು, ಆದರೆ ಅವರನ್ನು ಮತ್ತೆ ಆಹ್ವಾನಿಸದಿರಲು ನಿರ್ಧರಿಸಿದ್ದೇವೆ, ಮದುವೆ ಕಾರ್ಯಕ್ರಮಕ್ಕೆ ಚುನಾವಣಾ ಅಧಿಕಾರಿಗಳು ಬಂದು  ಸಮಾರಂಭದ ಸಂತೋಷವನ್ನು ಹಾಳು ಮಾಡುವುದು ನಮಗೆ ಇಷ್ಟವಿಲ್ಲ ಎಂದು ಮದುವೆ ಆಯೋಜಕರು ಹೇಳಿದ್ದಾರೆ,
ಚುನಾವಣಾ ಆಯೋಗದ ಈ ಕ್ರಮಕ್ಕೆ ಕಾಂಗ್ರೆಸ ಎಂಎಲ್ ಸಿ ಐವಾನ್ ಡಿಸೋಜಾ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ, ಆಯೋಗದ ನಿರ್ಧಾರದಿಂದ ಮದುವೆ ಸಮಾರಂಭಗಳಿಗೆ ಮಾತ್ರವಲ್ಲ, ಆಯೋಜಕರು ಯಾವುದೇ ಧಾರ್ಮಿಕ ಹಾಗೂ ಇನ್ನಿತರ ಸಭೆ ಸಮಾರಂಭಗಳಿಗೂ ಆಹ್ವಾನಿಸುತ್ತಿಲ್ಲ ಎಂದು ಹೇಳಿದ್ದಾರೆ, ಈ ರೀತಿಯ ಚುನಾವಣಾ ನೀತಿ ಸಂಹಿತೆಗಳು ಎಲ್ಲಿಯೂ ಇಲ್ಲ, ಎಲ್ಲಿಯಾದರೂ ಇದ್ದರೇ ಅವರು ಅದನ್ನು ನನಗೆ ತೋರಿಸಲಿ ಎಂದು ಹೇಳಿದ್ದಾರೆ.
ಇನ್ನೂ ಕ್ಯಾಥೋಲಿಕ್ ರ ಮದುವೆ ಸಮಾರಂಭಗಳಲ್ಲಿ ಮದ್ಯದ ಪೂರೈಕೆ ಇರುತ್ತದೆ, ಆದರೆ ನೀತಿ ಸಂಹಿತೆಯಿಂದಾಗಿ ಮದುವೆ ಕಾರ್ಯಕ್ರಮಕ್ಕೆ ಹೆಚ್ಚಿನ ಮದ್ಯ ಖರೀದಿ ಮಾಡಲು ಆಗುತ್ತಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT