ಗೃಹ ಸಚಿವ ರಾಮಲಿಂಗಾ ರೆಡ್ಡಿ 
ರಾಜಕೀಯ

ಬಸವಣ್ಣ ಪ್ರತಿಮೆಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?: ಸಚಿವ ರಾಮಲಿಂಗಾ ರೆಡ್ಡಿ

ಕ್ರಾಂತಿಯೋಗಿ ಬಸವಣ್ಣ ಅವರ ಜಯಂತ್ಯೋತ್ವದ ದಿನದಂದು ಬಸವೇಶ್ವರ ಪುತ್ಥಳಿಗೆ ಹೂವಿನ ಹಾರ ಹಾಕಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುವುದಿಲ್ಲ ಎಂಬ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಬೆಂಗಳೂರು: ಕ್ರಾಂತಿಯೋಗಿ ಬಸವಣ್ಣ ಅವರ ಜಯಂತ್ಯೋತ್ವದ ದಿನದಂದು ಬಸವೇಶ್ವರ ಪುತ್ಥಳಿಗೆ ಹೂವಿನ ಹಾರ ಹಾಕಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುವುದಿಲ್ಲ ಎಂಬ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಶೋಭಾ ಕರಂದ್ಲಾಜೆಯವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ರಾಮಲಿಂಗಾ ರೆಡ್ಡಿಯವರು, ಹಾರ ಹಾಕಬಾರದು ಎಂದು ಹೇಳಲು ಶೋಭಾ ಕರಂದ್ಲಾಜೆ ಯಾರು? 12ನೇ ಶತಮಾನದ ತತ್ತ್ವಜ್ಞಾನಿ ಬಸವೇಶ್ವರ ಅವರು ಶೋಭಾ ಕರಂದ್ಲಾಜೆಯವರ ಆಸ್ತಿಯಲ್ಲ ಎಂದು ಹೇಳಿದ್ದಾರೆ. 
ಬಳಿಕ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 
ನಿನ್ನೆ ರಾತ್ರಿ ಹಾವೇರಿಯಲ್ಲಿ ಅನಂತ್ ಕುಮಾರ್ ಹೆಗಡೆಯವರ ಕಾರು ಅಪಘಾತಕ್ಕೀಡಾಗಿತ್ತು. ಲಾರಿಯೊಂದು ಅನಂತ್ ಕುಮಾರ್ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದು, ಕೂದಲೆಳೆ ಅಂತರದಲ್ಲಿ ಹೆಗಡೆಯವರು ಪ್ರಾಣಾಪಾಯದಿಂದ ಪಾರಾಗಿದ್ದರು. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ್ದ ಹೆಗಡೆಯವರು, ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT