ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದೊಡನೆ ಬಾದಾಮಿ ಇಂದಲೂ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಅಲ್ಲಲ್ಲಿ ಹರಿದಾಡುತ್ತಿದೆ. ಇದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರ ಪುತ್ರ ಡಾ.ಯತೀಂದ್ರ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.
’ಏಪ್ರಿಲ್ 23ರಂದು ಸಿದ್ದರಾಮಯ್ಯ ಬಾದಾಮಿ ವಿಧಾನಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಯತೀಂದ್ರ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದ ಯತೀಂದ್ರ ಕೆಲವೇ ಸಮಯದ ಬಳಿಕ ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ..
ಹೈಕಮಾಂಡ್ ಹೇಳಿದರೆ ಮಾತ್ರವೇ ಬಾದಾಮಿಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ್ದ ಸಿದ್ದರಾಮಾಯ್ಯ "ನಾನು ಚಾಮುಂಡೇಶ್ವರಿ ಕ್ಷೇತ್ರದೊಡನೆ ಬದಾಮಿಯಿಂದ ಸಹ ಏಕಕಾಲಕ್ಕೆ ಕಣಕ್ಕಿಳಿಯುವುದರ ಕುರಿತು ಹೈಕಮಾಂಡ್ ನಿರ್ಧರಿಸಲಿದೆ. ಬಾದಾಮಿಯಿಂದ ಸ್ಪರ್ಧಿಸುವಂತೆ ಉತ್ತರ ಕರ್ನಾಟಕದ ಕೆ;ಲ ಮುಖಂಡರು, ಬೆಂಬಲಿಗರು ಒತ್ತಡ ತರುತ್ತಿದ್ದಾರೆ. ಆದರೆ ಇದರಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ" ಎಂದರು.