ಉಮೇದುವಾರಿಕೆ ಸಲ್ಲಿಕೆ ವೇಳೆ ಕನ್ನಡದಲ್ಲಿ ಸಹಿ ಮಾಡಿದ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಇಂಗ್ಲೀಷ್ ನಲ್ಲಿ ಸಹಿ ಮಾಡಿ ಎಂದ ಅಧಿಕಾರಿಗೆ ಸಿಎಂ ಹೇಳಿದ್ದೇನು ಗೊತ್ತಾ?

ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮ ಅನಾವರಣಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ವೇದಿಕೆ ಕಲ್ಪಿಸಿಕೊಟ್ಟಿತ್ತು.

ಮೈಸೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮ ಅನಾವರಣಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ವೇದಿಕೆ ಕಲ್ಪಿಸಿಕೊಟ್ಟಿತ್ತು.
ಹೌದು. ಇಂದು ತಮ್ಮ ತವರು ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.  ಈ ವೇಳೆ ಭಿಫಾರಂ ಸಲ್ಲಿಕೆ ಮಾಡಿದ ಸಿಎಂ ದಾಖಲೆಗಳಿಗೆ ಸಹಿ ಹಾಕಿದರು. ಸಿಎಂ ಸಿದ್ದರಾಮಯ್ಯ ಕನ್ನಡದಲ್ಲಿ ಸಹಿ ಮಾಡುತ್ತಿರುವುದನ್ನು ಕಂಡ ಚುನಾವಣಾ ಅಧಿಕಾರಿಯೊಬ್ಬರು, ಇಂಗ್ಲೀಷ್ ನಲ್ಲಿ ಸಹಿ ಮಾಡುವಂತೆ ಮನವಿ ಮಾಡಿಕೊಂಡರು.
ಆಗ ಚುನಾವಣಾ ಅಧಿಕಾರಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕನ್ನಡದಲ್ಲೇ ಸಹಿ ಮಾಡುವುದಾಗಿ ಹೇಳಿದರು. ಅಲ್ಲದೆ ಇಂಗ್ಲೀಷ್ ಬಾರದವರು ಏನು ಮಾಡಬೇಕು. ಇಂಗ್ಲೀಷ್ ನಲ್ಲಿ ಮಾತ್ರ ಸಹಿ ಹಾಕಬೇಕು ಎಂದು ನಿಯಮವೇನಾದರೂ ಇದೆಯೇ ಎಂದು ಪ್ರಶ್ನೆ ಮಾಡಿದರು. ಅಲ್ಲದೆ ಕನ್ನಡದಲ್ಲೇ ಸಹಿ ಹಾಕಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. 
ಉಮೇದುವಾರಿಕೆ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ, '1983 ರಲ್ಲಿ ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದ್ದಾಗ ನನಗೆ ಆತಂಕ ಇತ್ತು. ಈಗ ನನಗೆ ಯಾವುದೇ ಆತಂಕ ಇಲ್ಲ. ತುಂಬಾ ಸಮಾಧಾನದಿಂದ ಇದ್ದೇನೆ. ನನಗೆ ರಾಜಕೀಯದಲ್ಲಿ ಶತ್ರುಗಳು, ಹಿತ ಶತ್ರುಗಳು ಯಾರು ಇಲ್ಲ. ಕೇವಲ ರಾಜಕೀಯ ವಿರೋಧಿಗಳು ಇದ್ದಾರೆ ಅಷ್ಟೇ. ಚಾಮುಂಡೇಶ್ವರಿ ಜನ ನನಗೆ ಆಶೀರ್ವಾದಿಸುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT