ರಘುಪತಿ ಭಟ್ ಸುದ್ದಿಗೋಷ್ಠಿ 
ರಾಜಕೀಯ

ವಿವಾದಗಳೆಲ್ಲ ಮುಗಿದ ಅಧ್ಯಾಯ: ಉಡುಪಿ ಬಿಜೆಪಿ ಅಭ್ಯರ್ಥಿ ರಘುಪತಿ ಭಟ್

ಬಿಜೆಪಿಯ ಅಭಿವೃದ್ಧಿ ಅಜೆಂಡಾ ಆಧಾರದ ಮೇಲೆ ಮತಯಾಚಿಸುವುದಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿ :  ಬಿಜೆಪಿಯ ಅಭಿವೃದ್ಧಿ ಅಜೆಂಡಾ ಆಧಾರದ ಮೇಲೆ ಮತಯಾಚಿಸುವುದಾಗಿ  ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.

ತಮ್ಮ ವಿರುದ್ಧ ಎದ್ದಿದ್ದ ವಿವಾದಗಳೆಲ್ಲ ಮುಗಿದ ಅಧ್ಯಾಯವಾಗಿದ್ದು, ಜನವರಿ ತಿಂಗಳಿನಿಂದಲೂ ಮತದಾರ ಬಾಗಿಲಿಗೆ ಭೇಟಿ ನೀಡಿ ಮತಯಾಚಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆಲ ಸಮೀಕರಣದ ಲೆಕ್ಕಾಚಾರದಿಂದಾಗಿ ನಿಧಾನವಾಗಿ ಟಿಕೆಟ್ ಘೋಷಣೆ ಮಾಡಲಾಗಿದ್ದು ಏ.23 ರಂದು ನಾಮಪತ್ರ ಸಲ್ಲಿಸುವುದಾಗಿ ಹೇಳಿದರು.

ಡಾ. ವಿ.ಎಸ್. ಆಚಾರ್ಯ ನಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. 2004 ಹಾಗೂ 2008ರ ಅವಧಿಯಲ್ಲಿ ಶಾಸಕನಾಗಿದ್ದಾಗ ಹಲವು ಕೆಲಸಗಳನ್ನು ಮಾಡಿರುವುದಾಗಿ ತಿಳಿಸಿದರು.

 ಮೇ 1 ರಂದು ಪ್ರಧಾನಿ ನರೇಂದ್ರಮೋದಿ ಉಡುಪಿಗೆ ಆಗಮಿಸಿದ್ದು, ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.  ಅವರ ಭೇಟಿ ನೀಡುವುದರಿಂದ ಪಕ್ಷಕ್ಕೆ ಅದೃಷ್ಟ ಬಂದಂತಾಗುತ್ತದೆ ಎಂದು ಅವರು, ಉಡುಪಿಯ ಅಷ್ಟಮಠಗಳಿಗೂ ಭೇಟಿ ನೀಡುವುದಾಗಿ ಹೇಳಿದರು.
 
ಶಿರೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಗುವುದು, ಚುನಾವಣೆಗೆ ಸ್ಪರ್ಧಿಸದಂತೆ ಮನವಿ ಮಾಡಲಾಗುವುದು ಎಂದ ಅವರು, ಬಿಜೆಪಿ ಶ್ರೀ ಕೃಷ್ಣ ಮಠದೊಂದಿಗೆ ಯಾವಾಗಲೂ ಉತ್ತಮ  ಸಂಬಂಧ ವಿದೆ. ಆದರೆ, ಕೆಲ ವ್ಯಕ್ತಿಗಳು ತೊಂದರೆ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!