ಮರುಳಿಧರ್ ರಾವ್ 
ರಾಜಕೀಯ

ಸಿದ್ದರಾಮಯ್ಯ, ಬಿಎಸ್ ವೈಗಿರುವ ವ್ಯತ್ಯಾಸ ಇದೇ: ಮುರಳಿಧರ್ ರಾವ್ ಟ್ವೀಟ್

ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ...

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.
ಇಂದು ಸ್ವತಃ ಬಿಎಸ್ ಯಡಿಯೂರಪ್ಪ ಅವರೇ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಅವರು, ಒಬ್ಬ ನಾಯಕ(ಬಿಎಸ್ ಯಡಿಯೂರಪ್ಪ) ತನ್ನ ಮಗನಿಗೆ ಚುನಾವಣೆಯಲ್ಲಿ ನಿಲ್ಲಬೇಡ ಎಂದರೆ ಮತ್ತೊಬ್ಬ ನಾಯಕ(ಮುಖ್ಯಮಂತ್ರಿ ಸಿದ್ದರಾಮಯ್ಯ) ಎರಡು ಕ್ಷೇತ್ರಗಳಲ್ಲಿ ತಾನು ಸ್ಪರ್ಧಿಸುವುದಲ್ಲದೆ ಮತ್ತೊಂದು ಕ್ಷೇತ್ರದಲ್ಲಿ ತನ್ನ ಮಗನನ್ನು ಕಣಕ್ಕಿಳಿಸಿದ್ದಾನೆ. ಇದು ಈ ಇಬ್ಬರು ನಾಯಕರಿಗಿರುವ ವ್ಯತ್ಯಾಸ ಎಂದು ಹೇಳಿದ್ದಾರೆ.
ಮುರಳಿಧರ್ ರಾವ್ ಅವರು ಎರಡು ದಿನಗಳ ಹಿಂದಷ್ಟೇ ರಾಜ್ಯದ ಆಡಳಿತದ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ಸಾರ್ ಎಂದು ಟಾಂಗ್ ಕೊಟ್ಟಿದ್ದರು. ಕೆಲ ಹೊತ್ತಿನ ನಂತರ ಮುರಳಿಧರ್ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT