ಸಾಂದರ್ಭಿಕ ಚಿತ್ರ 
ರಾಜಕೀಯ

ಮಂಡ್ಯದಲ್ಲಿ ಅಂಬಿ ಬದಲು ಕಾಂಗ್ರೆಸ್ ಅಭ್ಯರ್ಥಿಯಾಗಿ ರವಿ ಗಾಣಿಗ ನಾಮಪತ್ರ

ಮಾಜಿ ಸಚಿವ ರೆಬಲ್​ ಸ್ಟಾರ್​ ಅಂಬರೀಶ್​ ಅವರ ಮೊಂಡಾಟಕ್ಕೆ ಹೈರಾಣಾಗಿದ್ದ ಕಾಂಗ್ರೆಸ್​ ಕೊನೆಗೂ ಮಂಡ್ಯ ಟಿಕೆಟ್​ ಅನ್ನು....

ಮಂಡ್ಯ: ಮಾಜಿ ಸಚಿವ ರೆಬಲ್​ ಸ್ಟಾರ್​ ಅಂಬರೀಶ್​ ಅವರ ಮೊಂಡಾಟಕ್ಕೆ ಹೈರಾಣಾಗಿದ್ದ ಕಾಂಗ್ರೆಸ್​ ಕೊನೆಗೂ ಮಂಡ್ಯ ಟಿಕೆಟ್​ ಅನ್ನು ಪ್ರಬಲ ಆಕಾಂಕ್ಷಿಯಾಗಿದ್ದ ರವಿಕುಮಾರ್ ಗೌಡ ಗಾಣಿಗ ಅವರಿಗೆ ನೀಡಿದೆ.
ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಸ್ಪರ್ಧಿಸಲು ನಿರಾಕರಿಸಿದ ಕಾರಣ ಕೊನೆ ಕ್ಷಣದಲ್ಲಿ ರವಿ ಗಾಣಿಗ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅಂಬರೀಶ್ ತಾವು ನಿಲ್ಲದಿದ್ದರೆ ನನಗೆ ಟಿಕೆಟ್​ ಕೊಡಿಸುತ್ತಾರೆ ಎಂದು ನಂಬಿಕೊಂಡಿದ್ದ ಅವರ ಆಪ್ತ ಅಮರಾವತಿ ಚಂದ್ರಶೇಖರ್​ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂಬರೀಶ್‌ ಸ್ಪರ್ಧೆ ಮಾಡದಿದ್ದರೆ ತಮಗೇ ಟಿಕೆಟ್‌ ಕೊಡಿ ಎಂದು ಅಮರಾವತಿ ಚಂದ್ರಶೇಖರ್‌ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಅಂಬರೀಶ್‌ ತಮಗೆ ಅವಕಾಶ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು. ಇದರಿಂದ ಆಕ್ರೋಶಗೊಂಡಿರುವ ಅಂಬರೀಶ್‌ ತಾವು ಯಾರಿಗೂ ಟಿಕೆಟ್‌ ಕೊಡಿಸುವ ಭರವಸೆ ನೀಡಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT