ಸಂಗ್ರಹ ಚಿತ್ರ 
ರಾಜಕೀಯ

ಶಾಂತಿನಗರದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಎನ್ ಎ ಹ್ಯಾರಿಸ್

ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.

ಬೆಂಗಳೂರು: ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.
ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್ ಎ ಹ್ಯಾರಿಸ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಹ್ಯಾರಿಸ್, ಶಾಂತಿನಗರದಲ್ಲಿ ಕಾಂಗ್ರೆಸ್ ಶತಾಯಗತಾಯ ಗೆಲ್ಲಲಿದೆ. ಆ ಮೂಲಕ ಸತತ ಮೂರನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಇದೇ ಹ್ಯಾರಿಸ್ ಅವರ ಪುತ್ರ ಎನ್ ಎ ನಲಪಾಡ್ ಪಬ್ ವೊಂದರಲ್ಲಿ ಗಲಾಟೆ ಮಾಡಿಕೊಂಡು ವಿದ್ವತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಬಂಧಿತರಾಗಿರುವ ನಲಪಾಡ್ ಇನ್ನೂ ಬಂಧನದಲ್ಲೇ ಇದ್ದಾರೆ. ಇದೇ ಕಾರಣಕ್ಕೆ ಹ್ಯಾರಿಸ್ ಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಹೇಳಲಾಗಿತ್ತು. ಅಂತೆಯೇ ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಹ್ಯಾರಿಸ್ ಅವರ ಹೆಸರು ನಾಪತ್ತೆಯಾಗಿತ್ತು. ಬಳಿಕ ನಡೆಜದ ಸತತ ರಾಜಕೀಯ ಬೆಳವಣಿಗೆಗಳ ಬಳಿಕ ಮತ್ತು ಹ್ಯಾರಿಸ್ ಅವರ ಒತ್ತಾಯದ ಮೇರೆಗೆ ಶಾಂತಿನಗರದಲ್ಲಿ ಮತ್ತೆ ಅವರಿಗೆ ಟಿಕೆಟ್ ನೀಡಲಾಗಿದೆ. ನಿನ್ನೆಯಷ್ಟೇ ಹ್ಯಾರಿಸ್ ಶಾಂತಿನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು. 
ಈ ಬಗ್ಗೆ ಮಾತನಾಡಿರುವ ಹ್ಯಾರಿಸ್, ಶಾಂತಿ ನಗರ ಮಿನಿ ಭಾರತವಿದ್ದಂತೆ. ಇಲ್ಲಿ ನಾನು ಸಾಕಷ್ಚು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಪ್ರಮುಖವಾಗಿ ನಗರದ ವಾಣಿಜ್ಯ ಕೇಂದ್ರವಾಗಿ ಶಾಂತಿನಗರವನ್ನು ರೂಪಿಸಿದ್ದೇನೆ. ಕಳೆದ ಐದು ವರ್ಷದಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಹತ್ತಾರು ಕೋಟಿ ಅನುದಾನ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಇನ್ನೂ ಸಾಕಷ್ಟು ಕಾರ್ಯಕ್ರಮಗಳು ಚಾಲನೆಯಾಗಬೇಕಿದೆ. ಪ್ರಮುಖವಾಗಿ ನಾನು ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಕಷ್ಟಕಾಲದಲ್ಲಿ ಹಲವರು ನನ್ನ ಜೊತೆಯಲ್ಲಿದ್ದರು ಎಂದು ಹ್ಯಾರಿಸ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT