ಸಂಗ್ರಹ ಚಿತ್ರ 
ರಾಜಕೀಯ

ಶಾಂತಿನಗರದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಎನ್ ಎ ಹ್ಯಾರಿಸ್

ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.

ಬೆಂಗಳೂರು: ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.
ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್ ಎ ಹ್ಯಾರಿಸ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಹ್ಯಾರಿಸ್, ಶಾಂತಿನಗರದಲ್ಲಿ ಕಾಂಗ್ರೆಸ್ ಶತಾಯಗತಾಯ ಗೆಲ್ಲಲಿದೆ. ಆ ಮೂಲಕ ಸತತ ಮೂರನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಇದೇ ಹ್ಯಾರಿಸ್ ಅವರ ಪುತ್ರ ಎನ್ ಎ ನಲಪಾಡ್ ಪಬ್ ವೊಂದರಲ್ಲಿ ಗಲಾಟೆ ಮಾಡಿಕೊಂಡು ವಿದ್ವತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಬಂಧಿತರಾಗಿರುವ ನಲಪಾಡ್ ಇನ್ನೂ ಬಂಧನದಲ್ಲೇ ಇದ್ದಾರೆ. ಇದೇ ಕಾರಣಕ್ಕೆ ಹ್ಯಾರಿಸ್ ಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಹೇಳಲಾಗಿತ್ತು. ಅಂತೆಯೇ ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಹ್ಯಾರಿಸ್ ಅವರ ಹೆಸರು ನಾಪತ್ತೆಯಾಗಿತ್ತು. ಬಳಿಕ ನಡೆಜದ ಸತತ ರಾಜಕೀಯ ಬೆಳವಣಿಗೆಗಳ ಬಳಿಕ ಮತ್ತು ಹ್ಯಾರಿಸ್ ಅವರ ಒತ್ತಾಯದ ಮೇರೆಗೆ ಶಾಂತಿನಗರದಲ್ಲಿ ಮತ್ತೆ ಅವರಿಗೆ ಟಿಕೆಟ್ ನೀಡಲಾಗಿದೆ. ನಿನ್ನೆಯಷ್ಟೇ ಹ್ಯಾರಿಸ್ ಶಾಂತಿನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು. 
ಈ ಬಗ್ಗೆ ಮಾತನಾಡಿರುವ ಹ್ಯಾರಿಸ್, ಶಾಂತಿ ನಗರ ಮಿನಿ ಭಾರತವಿದ್ದಂತೆ. ಇಲ್ಲಿ ನಾನು ಸಾಕಷ್ಚು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಪ್ರಮುಖವಾಗಿ ನಗರದ ವಾಣಿಜ್ಯ ಕೇಂದ್ರವಾಗಿ ಶಾಂತಿನಗರವನ್ನು ರೂಪಿಸಿದ್ದೇನೆ. ಕಳೆದ ಐದು ವರ್ಷದಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಹತ್ತಾರು ಕೋಟಿ ಅನುದಾನ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಇನ್ನೂ ಸಾಕಷ್ಟು ಕಾರ್ಯಕ್ರಮಗಳು ಚಾಲನೆಯಾಗಬೇಕಿದೆ. ಪ್ರಮುಖವಾಗಿ ನಾನು ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಕಷ್ಟಕಾಲದಲ್ಲಿ ಹಲವರು ನನ್ನ ಜೊತೆಯಲ್ಲಿದ್ದರು ಎಂದು ಹ್ಯಾರಿಸ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT