ಶ್ರೀರಾಮುಲು-ಜನಾರ್ದನ ರೆಡ್ಡಿ 
ರಾಜಕೀಯ

ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿಯ ಸ್ಟಾರ್ ಪ್ರಚಾರಕ ಅಲ್ಲ: ಡಾ. ವಾಮನ ಆಚಾರ್ಯ

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರು ಎಂದು ನಾವು ಎಲ್ಲಿಯೂ ಕರೆದಿಲ್ಲ ಎಂದು ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ.

ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರು ಎಂದು ನಾವು ಎಲ್ಲಿಯೂ ಕರೆದಿಲ್ಲ ಎಂದು ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ. 
ಜನಾರ್ದನ ರೆಡ್ಡಿಯನ್ನು ನಾವು ಎಲ್ಲಿಯೂ ಪ್ರಚಾರಕ್ಕೆ ಕರೆದಿಲ್ಲ. ಅವರೇನು ಗಲ್ಲು ಶಿಕ್ಷೆಗೆ ಗುರಿಯಾಗಿಲ್ಲ. ಅವರು ಸಹ ಸಾಮಾನ್ಯ ಕಾರ್ಯಕರ್ತರಾಗಿ ಪ್ರಚಾರ ಮಾಡಲಿದ್ದಾರೆ ಎಂದು ವಾಮನಾಚಾರ್ಯ ಹೇಳಿದರು. 
ಜನಾರ್ದನ ರೆಡ್ಡಿ ಪ್ರಚಾರ ಮಾಡುವುದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಿದೆ ಎಂದು ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪನವರು ಹೇಳಿಲ್ಲ. ಮೊಳಕಾಲ್ಮೂರು ಕ್ಷೇತ್ರದಲ್ಲಿ ನಮ್ಮ ನಾಯಕರು ಶ್ರೀರಾಮುಲು ಹೊರತು, ಜನಾರ್ದನ ರೆಡ್ಡಿ ಅಲ್ಲ ಎಂದರು. 
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ವಾಮಾನಾಚಾರ್ಯ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೂ ರಾಜ್ಯ ಸರ್ಕಾರ ಆ ಹಣವನ್ನು ಸದ್ಬಳಕೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಐದು ವರ್ಷದಿಂದ ರಾಜಕೀಯ ಬಿಟ್ಟು ಅಭಿವೃದ್ದಿ ಮಾತ್ರ ಕಂಡಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT