ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಬೆಂಬಲಿಗರೆಡೆ ಕೈಬೀಸಿದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು 
ರಾಜಕೀಯ

ಸಿದ್ದರಾಮಯ್ಯ-ಶ್ರೀರಾಮುಲು ಜಿದ್ದಾಜಿದ್ದಿ: ಯಾರಿಗೆ ಒಲಿಯಲಿದೆ ಬಾದಾಮಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಬಿ.ಶ್ರೀರಾಮುಲು ಪ್ರಮುಖ ಆಕರ್ಷಣೆಯ ...

ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಬಿ.ಶ್ರೀರಾಮುಲು ಪ್ರಮುಖ ಆಕರ್ಷಣೆಯ ಕೇಂದ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ವಿಧಾನಸಭೆ ಚುನಾವಣೆಯ ಸ್ಪರ್ಧಾಕಣ ರಂಗೇರುತ್ತಿದೆ.
ಈ ಮೂಲಕ ಇಷ್ಟು ದಿನಗಳವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂಬ ಚರ್ಚೆ, ಕುತೂಹಲಗಳಿಗೆ ತೆರೆಬಿದ್ದಿದೆ.

ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಬಿ.ಶ್ರೀರಾಮುಲು ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಬಾದಾಮಿ ತಾಲ್ಲೂಕು ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರುತ್ತಿದ್ದಂತೆ 100ಕ್ಕೂ ಹೆಚ್ಚು ಎತ್ತಿನ ಗಾಡಿಗಳಲ್ಲಿ ಬಂದ ಜನರು ಸಾಂಪ್ರದಾಯಿಕವಾಗಿ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಾದಾಮಿಯ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ರೋಡ್ ಶೋ ಹಾಗೂ ಕಾಳಿದಾಸ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿದರು.

ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರ ಜೊತೆ ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಉಸ್ತುವಾರಿ ಪಿ.ಮುರಳೀಧರ ರಾವ್ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೂಡ ಇದ್ದರು.

ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಲಿದ್ದು ಇಬ್ಬರು ಅಭ್ಯರ್ಥಿಗಳು ಕೂಡ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT