ಅಮಿತ್ ಶಾ 
ರಾಜಕೀಯ

ಕೇಂದ್ರ ಕೊಟ್ಟ ಅನುದಾನ ಎಲ್ಲಿ ಹೋಯ್ತು, ಸಿಎಂ ಲೆಕ್ಕ ಕೊಡಲಿ: ಅಮಿತ್ ಶಾ

ಐದು ವರ್ಷ ಆಡಳಿತ ನಡೆಸಿದ ಸಿಎಂ ಸಿದ್ದರಾಮಯ್ಯ ಲೆಕ್ಕಕೊಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳ: ಐದು ವರ್ಷ ಆಡಳಿತ ನಡೆಸಿದ ಸಿಎಂ ಸಿದ್ದರಾಮಯ್ಯ ಲೆಕ್ಕಕೊಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ 'ಚುನಾವಣಾ ಪ್ರಚಾರದ ಬಹಿರಂಗ ಸಮಾವೇಶ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ''ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್‌ ಬಾಬಾ ಅವರು ಮಾತಿಗೊಮ್ಮೆ ಮೋದಿ ಅವರು ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಎಂದು ಕೇಳುತ್ತಾರೆ. ಅವರಿಗೆ ನಾವು ಉತ್ತರ ಕೊಡಬೇಕಿಲ್ಲ. ಮುಂದಿನ ಲೋಕಸಭೆ ಚುನಾವಣೆ ಬಂದಾಗ ಕರ್ನಾಟಕಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಎನ್ನುವುದನ್ನು ಜನರ ಮುಂದೆ ಲೆಕ್ಕಸಹಿತ ವಿವರಿಸುತ್ತೇವೆ'' ಎಂದರು. 
'ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ 13ನೇ ಹಣಕಾಸು ಯೋಜನೆಯಡಿ ಕರ್ನಾಟಕಕ್ಕೆ 88ಸಾವಿರ ಕೋಟಿ ರೂ. ನೀಡಲಾಗಿತ್ತು. ಈಗಿನ ಬಿಜೆಪಿ ಸರಕಾರ 1ಲಕ್ಷ 19ಸಾವಿರ ಕೋಟಿ ರೂ. ಅನುದಾನ ನೀಡಿದೆ. ಆದರೆ ಈ ಹಣ ಜನರ ಅಭಿವೃದ್ಧಿಗೆ ಬಳಕೆಯಾಗಿಲ್ಲ. ಗಂಗಾವತಿ ನಗರ ಪವಿತ್ರ ಸ್ಥಳ, ಅಂಜನಿಪುತ್ರ ಹನುಮಾನ್‌ ಜನಿಸಿದ ಪುಣ್ಯಭೂಮಿ. ಇಂತಹ ನೆಲಕ್ಕೆ ಬಂದಿರುವುದು ನನ್ನ ಪುಣ್ಯ'' ಎಂದು ಹೇಳಿದರು. ತಮ್ಮ ಆಗಮನ ವಿಳಂಬವಾಗಿದ್ದಕ್ಕೆ ಕ್ಷಮೆ ಕೋರಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT