ಕರ್ನಾಟಕ ಚುನಾವಣೆ: ಬಿಜೆಪಿ ಪಕ್ಷದ ಮೂರು ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ನಿಷೇಧ 
ರಾಜಕೀಯ

ಕರ್ನಾಟಕ ಚುನಾವಣೆ: ಬಿಜೆಪಿ ಪಕ್ಷದ ಮೂರು ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ನಿಷೇಧ

ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ತಯಾರಿಸಿದ್ದ ಮೂವು ವೀಡಿಯೋ ಜಾಹೀರಾತುಗಳನ್ನು ಮಾದ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿ (ಎಂಸಿಎಂಸಿ) ಶುಕ್ರವಾರ ನಿಷೇಧಿಸಿದೆ.

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ  ತಯಾರಿಸಿದ್ದ ಮೂವು ವೀಡಿಯೋ ಜಾಹೀರಾತುಗಳನ್ನು ಮಾದ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿ (ಎಂಸಿಎಂಸಿ) ಶುಕ್ರವಾರ ನಿಷೇಧಿಸಿದೆ. ಜೆಪಿಸಿಸಿ ನೀಡಿದ್ದ ದೂರಿನ್ನ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಜಾಹೀರಾತು ತಯಾರು ಪ್ರಸಾರ ಮಾಡಲಾಗಿದೆ ಎಂದಿರುವ ಎಂಸಿಎಂಸಿ ಜಾಹೀರಾತು ಪ್ರಸಾರಕ್ಕೆ ತಡೆ ನಿಡಿದೆ.
ಎಂಎಲ್ಸಿ ವಿ ಎಸ್ ಉಗ್ರಪ್ಪ ಕೆಪಿಸಿಸಿ ಪರವಾಗಿ ಸಲ್ಲಿಸಿದ್ದ ದೂರಿನ ಮೇಲೆ ಜಾಹೀರಾತನ್ನು ನಿಷೇಧಿಸಲಾಗಿದ್ದು ಜಾಹೀರಾತುಗಳು ಚುನಾವಣಾ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿತ್ತು.
"ಜನ ವಿರೋಧಿ ಸರ್ಕಾರ", "ವಿಫಲ ಸರ್ಕಾರ" ಮತ್ತು "ಮೂರು ಭಾಗ್ಯ" ಎನ್ನುವ  35 ಸೆಕೆಂಡ್ ಹಾಗು '50 ಸೆಕೆಂಡ್ ಗಲ ಜಾಹೀರಾತಿಗೆ ನಿಷೇಧ ಹೇರಲಾಗಿದೆ.
ನಿಷೇಧಕ್ಕೊಳಗಾದ ಮೂರೂ ಜಾಹೀರಾತನ್ನು ಪ್ರಸಾರ ಮಾಡಲು ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಗಣೇಶ್ ಯಾಜಿಯವರಿಗೆ ಏಪ್ರಿಲ್ 22 ರಂದು ಅನುಮತಿ ನೀಡಲಾಗಿತ್ತು.
"ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಈ ಜಾಹೀರಾತು ಮಾಡೊದೆ.  ಕರ್ನಾಟಕದ ವಿವಿಧ ಟಿವಿ ಚಾನಲ್ ಗಳಲ್ಲಿ ಈ ಜಾಹೀರಾತು ಸರಣಿ ಪ್ರಸಾರವಾಗುತ್ತಿದ್ದು ಇದನ್ನು ತಕ್ಷಣ ನಿಷೇಧಿಸಬೇಕು" ಉಗ್ರಪ್ಪ ದೂರಿನಲ್ಲಿ ಹೇಳಿದ್ದರು.
ಬರುವ ಮೇ  12 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT