ರಾಜಕೀಯ

ಸಿದ್ದರಾವಣ ಹೇಳಿಕೆಗೆ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ದೂರು

Sumana Upadhyaya

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಮತ್ತು ನಿಂದನಕಾರಿ ಪ್ರಚಾರ ಮಾಡುವುದಕ್ಕೆ ರಾಜ್ಯ ಕಾಂಗ್ರೆಸ್ ಅಕ್ರಮ ಗಣಿಗಾರಿಕೆ ಆರೋಪಿ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾವಣ ಎಂದು ಕರೆದು ಜನಾರ್ದನ ರೆಡ್ಡಿ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಿದ್ದರಾಮಯ್ಯನವರನ್ನು ರಾವಣನಿಗೆ ಹೋಲಿಸುವ ಮೂಲಕ ಜನಾರ್ದನ ರೆಡ್ಡಿ ವರ್ಗಗಳ ನಡುವೆ ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರಡಿ ದ್ವೇಷವನ್ನು ಹುಟ್ಟುಹಾಕುವುದಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಇದು ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದ ಮತದಾರರನ್ನು ಸೆಳೆಯುವ ಪ್ರಯತ್ನವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್ ದೂರಿನಲ್ಲಿ ಆರೋಪಿಸಿದೆ.

ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜನಾರ್ದನ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ಪರ ಪ್ರಚಾರ ನಡೆಸಿದ್ದ ಜನಾರ್ದನ ರೆಡ್ಡಿ, ಬಿಜೆಪಿಯಿಂದ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಶ್ರೀರಾಮುಲು, ದೇವರು ರಾಕ್ಷಸರನ್ನು ಸಂಹಾರ ಮಾಡಿದಂತೆ ಬಿಜೆಪಿ ಸಿದ್ದರಾವಣನನ್ನು ನಾಶಮಾಡಲಿದ್ದಾರೆ ಎಂದು ಹೇಳಿದ್ದರು.

SCROLL FOR NEXT