ಬೆಂಗಳೂರಿನ ರಸ್ತೆ ಕಾಮಗಾರಿಯ ಭರವಸೆ ನೀಡಿರುವ ಕಾಂಗ್ರೆಸ್ 
ರಾಜಕೀಯ

ನಾಗರಿಕ ಸಂಸ್ಥೆಗಳ ಸಮನ್ವಯತೆಗೆ ಪ್ರಾಧಿಕಾರ ರಚನೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

ಉತ್ತಮ ಸಮನ್ವಯತೆ ಮತ್ತು ಬೆಂಗಳೂರಿಗೆ ಸಂಬಂಧಪಟ್ಟ ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ...

ಬೆಂಗಳೂರು: ಉತ್ತಮ ಸಮನ್ವಯತೆ ಮತ್ತು ಬೆಂಗಳೂರಿಗೆ ಸಂಬಂಧಪಟ್ಟ ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ತರಲು ಒಂದೇ ಸೂರಿನಡಿ ಹಲವು ನಾಗರಿಕ ಸಂಸ್ಥೆಗಳನ್ನು ತರಲು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸಾರ್ವಜನಿಕ ತನಿಖಾ ಪ್ರಾಧಿಕಾರವನ್ನು ತರಲು ಭರವಸೆ ನೀಡಿದ್ದು ಅದು ಈ ಸಂಸ್ಥೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರುತ್ತದೆ.

ಈ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸಣ್ಣ ನಿಗಮಗಳಾಗಿ ವಿಂಗಡಿಸುವುದರಲ್ಲಿ ಆಸಕ್ತಿ ಹೊಂದಿದ್ದು ಅವುಗಳನ್ನು ಇತರ ನಾಗರಿಕ ಸಂಸ್ಥೆಗಳ ಜೊತೆ ಬೃಹತ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ತರಲು ಒಲವು ತೋರಿರುವುದು ಕಂಡುಬರುತ್ತದೆ.

ಬೆಂಗಳೂರಿನಲ್ಲಿ ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಬಿಡಬ್ಲ್ಯುಎಸ್ಎಸ್ ಬಿ ಮತ್ತು ಇತರ ಕೆಲವು ನಾಗರಿಕ ಸಂಸ್ಥೆಗಳಿವೆ. ಈ ಎಲ್ಲಾ ಸಂಸ್ಥೆಗಳು ಬೆಂಗಳೂರು ನಗರಕ್ಕೆ ಕೆಲಸ ಮಾಡುವುದಿದ್ದರೂ ಈ ಸಂಸ್ಥೆಗಳ ಮಧ್ಯೆ ಸಮನ್ವಯದ ಕೊರತೆಯಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಅದು ಬೆಸ್ಕಾಂ ಮತ್ತು ಬಿಡಬ್ಲ್ಯುಎಸ್ಎಸ್ ಬಿಯಿಂದ ರಸ್ತೆ ಅಗೆಯುವ ಕೆಲಸ ಮಾಡುವುದಿರಲಿ, ಪಾದಚಾರಿ ಮಾರ್ಗವನ್ನು ಅತಿಕ್ರಮಿಸುವುದಾಗಲಿ ಅಥವಾ ಗಿಡ, ಮರಗಳನ್ನು ಕಡಿಯುವುದಾಗಲಿ ಬಿಬಿಎಂಪಿಗೆ ತಿಳಿಸದೆ ಮಾಡುತ್ತವೆ. ಈ ಸಂಸ್ಥೆಗಳಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಿದ್ದರೂ ಕೂಡ ಅಲ್ಲಿ ಸಮನ್ವಯದ ಕೊರತೆ ಎದ್ದು ಕಾಣುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!