ಬಿ. ಕೆ. ಹರಿಪ್ರಸಾದ್ 
ರಾಜಕೀಯ

ಕರ್ನಾಟಕ ಚುನಾವಣೆ: ಗಾಂಧಿ ಮತ್ತು ಗೋಡ್ಸೆ ನಡುವಿನ ಸೈದ್ದಾಂತಿಕ ಹೋರಾಟ; ಬಿಕೆ ಹರಿಪ್ರಸಾದ್

ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನಾಥೂರಾಮ್ ಗೋಡ್ಸೆ ಸಿದ್ದಾಂತಗಳ ನಡುವಿನ ಹೋರಾಟ ಆಗಿದೆ...

ಮಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನಾಥೂರಾಮ್ ಗೋಡ್ಸೆ ನಡುವಿನ ಸೈದ್ದಾಂತಿಕ ಹೋರಾಟ ಆಗಿದೆ ಎಂದು ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಚುನಾವಣೆಯಲ್ಲಿ   ಗಾಂಧೀಜಿಯವರ ಸರ್ವಧರ್ಮ ಸಹಬಾಳ್ವೆಯ ಸಿದ್ಧಾಂತ ಮತ್ತು ಗೋಡ್ಸೆಯ ಹಿಂಸೆಯ ಸಿದ್ದಾಂತಗಳು ಮುಖಾಮುಖಿ ಆಗಿವೆ. ಜನರು ಗಾಂಧೀಜಿಯವರ ಸಿದ್ಧಾಂತವನ್ನು ಬೆಂಬಲಿಸುವ ವಿಶ್ವಾಸವಿದೆ' ಎಂದರು.

ಜನರಿಗೆ ನೀಡಿದ್ದ ಯಾವುದೇ ಭರವಸೆ ಈಡೇರಿಸದ ಮೋದಿ ದೇಶದ ಇತಿಹಾಸದಲ್ಲಿ ಕಂಡ ದೊಡ್ದ ಸುಳ್ಳುಗಾರ ಪ್ರಧಾನಿ ಎಂದು ಟೀಕಿಸಿದ ಹರಿಪ್ರಸಾದ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ತಿಳಿಸಿದರು.

ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು ಕೊಲೆ‌ ಮಾಡಿಸಿದ ನಮೋ ಬ್ರಿಗೇಡ್ ಸಂಸ್ಥಾಪಕ ‌ನರೇಶ್ ಶೆಣೈ ಜೊತೆ ಇದ್ದ ಸಂಚುಗಾರರಿಗೂ ಬಿಜೆಪಿ ಟಿಕೆಟ್ ನೀಡಿದೆ.ಬಿಜೆಪಿ ಹಿಂದುಳಿದ ವರ್ಗದ ಜನರನ್ನು ಹಿಂಸೆಗೆ ಬಳಸಿಕೊಳ್ಳುತ್ತದೆ ಎಂದು ಮಾಜಿ ಸಚಿವ ಕೃಷ್ಣ ಪಾಲೇಮಾರ್  ಸತ್ಯವನ್ನೇ ಹೇಳಿದ್ದಾರೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT