ಬಿ. ಕೆ. ಹರಿಪ್ರಸಾದ್ 
ರಾಜಕೀಯ

ಕರ್ನಾಟಕ ಚುನಾವಣೆ: ಗಾಂಧಿ ಮತ್ತು ಗೋಡ್ಸೆ ನಡುವಿನ ಸೈದ್ದಾಂತಿಕ ಹೋರಾಟ; ಬಿಕೆ ಹರಿಪ್ರಸಾದ್

ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನಾಥೂರಾಮ್ ಗೋಡ್ಸೆ ಸಿದ್ದಾಂತಗಳ ನಡುವಿನ ಹೋರಾಟ ಆಗಿದೆ...

ಮಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನಾಥೂರಾಮ್ ಗೋಡ್ಸೆ ನಡುವಿನ ಸೈದ್ದಾಂತಿಕ ಹೋರಾಟ ಆಗಿದೆ ಎಂದು ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಚುನಾವಣೆಯಲ್ಲಿ   ಗಾಂಧೀಜಿಯವರ ಸರ್ವಧರ್ಮ ಸಹಬಾಳ್ವೆಯ ಸಿದ್ಧಾಂತ ಮತ್ತು ಗೋಡ್ಸೆಯ ಹಿಂಸೆಯ ಸಿದ್ದಾಂತಗಳು ಮುಖಾಮುಖಿ ಆಗಿವೆ. ಜನರು ಗಾಂಧೀಜಿಯವರ ಸಿದ್ಧಾಂತವನ್ನು ಬೆಂಬಲಿಸುವ ವಿಶ್ವಾಸವಿದೆ' ಎಂದರು.

ಜನರಿಗೆ ನೀಡಿದ್ದ ಯಾವುದೇ ಭರವಸೆ ಈಡೇರಿಸದ ಮೋದಿ ದೇಶದ ಇತಿಹಾಸದಲ್ಲಿ ಕಂಡ ದೊಡ್ದ ಸುಳ್ಳುಗಾರ ಪ್ರಧಾನಿ ಎಂದು ಟೀಕಿಸಿದ ಹರಿಪ್ರಸಾದ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ತಿಳಿಸಿದರು.

ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು ಕೊಲೆ‌ ಮಾಡಿಸಿದ ನಮೋ ಬ್ರಿಗೇಡ್ ಸಂಸ್ಥಾಪಕ ‌ನರೇಶ್ ಶೆಣೈ ಜೊತೆ ಇದ್ದ ಸಂಚುಗಾರರಿಗೂ ಬಿಜೆಪಿ ಟಿಕೆಟ್ ನೀಡಿದೆ.ಬಿಜೆಪಿ ಹಿಂದುಳಿದ ವರ್ಗದ ಜನರನ್ನು ಹಿಂಸೆಗೆ ಬಳಸಿಕೊಳ್ಳುತ್ತದೆ ಎಂದು ಮಾಜಿ ಸಚಿವ ಕೃಷ್ಣ ಪಾಲೇಮಾರ್  ಸತ್ಯವನ್ನೇ ಹೇಳಿದ್ದಾರೆ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT