ರಾಜಕೀಯ

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ಎಂಬಿ ಪಾಟೀಲ್

Shilpa D
ಬೆಂಗಳೂರು: ನಾವು ಎಂದಿಗೂ ಪ್ರತ್ಯೇಕ ರಾಜ್ಯ ಬಯಸಿದವರಲ್ಲ. ಅಖಂಡ ಕರ್ನಾಟಕ ನಮ್ಮ ಗುರಿ. ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯವನ್ನಲ್ಲ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇದೀಗ ಪ್ರತ್ಯೇಕ ಉತ್ತರ ಕರ್ನಾಟಕ ವಿಚಾರದಲ್ಲಿ ಪಕ್ಷದ ಪರ ಬ್ಯಾಟಿಂಗ್ ಮಾಡಿದ್ದು ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ,
ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ  ಎರಡು ಕಣ್ಣುಗಳಿದ್ದಂತೆ. ಆದರೆ ಎಲ್ಲರೂ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
SCROLL FOR NEXT