ದೇವೇಗೌಡ, ಯಡಿಯೂರಪ್ಪ ಮತ್ತು ಕುಮಾರ ಸ್ವಾಮಿ 
ರಾಜಕೀಯ

ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ವಿಚಾರ: ದೇವೇಗೌಡರಿಗೆ ಬಿಎಸ್ ವೈ ಕೇಳಿದ ಮೂರು ಪ್ರಶ್ನೆಗಳು ಏನು ಗೊತ್ತೆ?

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಮಾಡುತ್ತಿರುವ ಅವಾಂತರಗಳಿಗೆ ದೇವೇಗೌಡರೇ ...

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಮಾಡುತ್ತಿರುವ ಅವಾಂತರಗಳಿಗೆ ದೇವೇಗೌಡರೇ ಕಾರಣ, ಹೀಗಾಗಿ ಅವರೇ ನನ್ನ  ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾತನಾಡಿದ ಯಡಿಯೂರಪ್ಪ, ಉತ್ತರ ಕರ್ನಾಟಕ ವಿಚಾರದಲ್ಲಿ  ಬೆಂಕಿ ಹಚ್ಚಿದ್ದು ಸಿಎಂ ಕುಮಾರ ಸ್ವಾಮಿ, ಆದರೆ ನನ್ನನ್ನು ಸಿಕ್ಕಿಸಲಾಗುತ್ತಿದೆ. ಹೀಗಾಗಿ ನಾನು ಮಾಜಿ ಪ್ರಧಾನಿ  ಎಚ್ .ಡಿ ದೇವೇಗೌಡರಿಗೆ ಮೂರು ಪ್ರಶ್ನೆಗಳನ್ನು ಕೇಳುತ್ತೇನೆ, ಅದಕ್ಕೆ ದೇವೇಗೌಡರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ದೇವೇಗೌಡರಿಗೆ ಬಿ,ಎಸ್ ಯಡಿಯೂರಪ್ಪ ಅವರ ಮೂರುಪ್ರಶ್ನೆಗಳು
1 ಉತ್ತರ ಕರ್ನಾಟಕಕ್ಕೇ ಲಿಂಗಾಯತ ಸಿಎಂಗಳ ಕೊಡುಗೆ ಎನು ಎಂದು ಕೇಳಿದ್ದು ಯಾರು ?
2 ಉತ್ತರ ಕರ್ನಾಟಕದಿಂದ ರಾಜ್ಯಕ್ಕೆ ಏನು ಕೊಡುಗೆ ಏನು ಎಂದು ಹುಬ್ಬಳ್ಳಿಯಲ್ಲಿ ಪ್ರಶ್ನಿಸಿದವರು ಯಾರು?
3. ಚನ್ನಪಟ್ಟಣದಲ್ಲಿ ಜಾತಿ ಆಧಾರದಲ್ಲಿ ಮತ ಕೇಳಿದ್ದು ಯಾರು? 
ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ, ಈ ಎಲ್ಲಾ ಪ್ರಶ್ನೆಗಳನ್ನು ಹಾಕಿದವರು ಸಿಎಂ ಕುಮಾರ ಸ್ವಾಮಿ, ಹೀಗಾಗಿ ಅವರ ತಂದೆ ಎಚ್,ಡಿ ದೇವೇಗೌಡ ನನ್ನ ಈ ಎಲ್ಲಾ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕು ಎಂದು ತಿಳಿಸಿದ್ದಾರೆ.
ಇನ್ನೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕರ್ನಾಟಕ ಏಕೀಕರಣಕ್ಕಾಗಿ  ಸಾಕಷ್ಟು ಜನ ಹೋರಾಟ ಮಾಡಿದ್ದಾರೆ, ಹೋರಾಡಿದವರು ಈಗಿಲ್ಲ,  ಇತ್ತೀಚಿನ ರಾಜಕಾರಣಿಗಳನ್ನು ಅವರು ಕ್ಷಮಿಸುವುದಿಲ್ಲ, ನನ್ನ ವಿರುದ್ಧ ಅಸಂಬದ್ದ ಹೇಳಿಕೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT