ಕುಮಾರ ಸ್ವಾಮಿ ಮತ್ತು ಡಿ,ವಿ ಸದಾನಂದಗೌಡ 
ರಾಜಕೀಯ

ಕರ್ಚೀಫ್ ಒದ್ದೆಯಾಗುವವರೆಗೂ ಅಳಬೇಕೆ: ಎಚ್ ಡಿಕೆ ಕಣ್ಣೀರಿನ ಬಗ್ಗೆ ಡಿವಿಎಸ್ ವ್ಯಂಗ್ಯ!

ಅಳುವುದಕ್ಕೂ ಒಂದು ಮಿತಿಯಿದೆ. 2-3 ಕರ್ಚೀಫ್​ ಒದ್ದೆಯಾಗುವವರೆಗೂ ಯಾರಾದ್ರೂ ಕಣ್ಣೀರು ಹಾಕುತ್ತಾರಾ ಎಂದು ಕೇಂದ್ರ ಸಚಿವ ಡಿ.ವಿ ಸದನಾಂದಗೌಡ..

ಬೆಂಗಳೂರು: ಅಳುವುದಕ್ಕೂ ಒಂದು ಮಿತಿಯಿದೆ. 2-3 ಕರ್ಚೀಫ್​ ಒದ್ದೆಯಾಗುವವರೆಗೂ ಯಾರಾದ್ರೂ ಕಣ್ಣೀರು ಹಾಕುತ್ತಾರಾ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿರುವ ಸದಾನಂದಗೌಡರು, ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯದ ಅಭಿವೃದ್ಧಿಯಲ್ಲಿ ಯಾವ ಆಸಕ್ತಿಯೂ ಇಲ್ಲ ಎಂದು ಟೀಕಿಸಿದ್ದಾರೆ. 
ಕುಮಾರಸ್ವಾಮಿ ಅವರು ಕಣ್ಣನ್ನು ಒರೆಸಿಕೊಳ್ಳುತ್ತಿದ್ದ ಕರ್ಚೀಫ್​ನಲ್ಲಿ ಕಣ್ಣೀರು ಬರಿಸುವ ವಸ್ತುಗಳಿತ್ತೋ ಏನೋ ಗೊತ್ತಿಲ್ಲ ಎಂದು ಕಾಲೆಳೆದಿದ್ದಾರೆ.
ಮುದ್ರಣ ಮತ್ತು ಎಲೆಕ್ಟ್ರಾನಿಕ್​ ಮಾಧ್ಯಮಗಳಲ್ಲಿ ಮಸಾಲೆ ಸುದ್ದಿಗಳು ಬರುತ್ತಿವೆ. ಇಂಥ ಮಾಧ್ಯಮಗಳು ನಮಗೆ ಬೇಕಾಗಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರೇ ನಮಗೆ ಮೀಡಿಯಾಗಳು. ಕಾರ್ಯಕರ್ತರ ಎದುರು ಮತ್ತೊಂದು ಮೀಡಿಯಾ ಬೇಕಾಗಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT