ಎ.ಎಚ್ ವಿಶ್ವನಾಥ್ 
ರಾಜಕೀಯ

ದೇವೇಗೌಡ ದೇಶದ ಮುಂದಿನ ಪ್ರಧಾನಮಂತ್ರಿ, ಪ್ರಜ್ವಲ್ ರೇವಣ್ಣ ರಾಜಕೀಯಕ್ಕೆ ಬರಬೇಕು: ಎಚ್. ವಿಶ್ವನಾಥ್

ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭವಾಗಿದ್ದು, ಎಚ್.ಡಿ ದೇವೇಗೌಡರು ಮುಂದಿನ ಪ್ರಧಾನಮಂತ್ರಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ...

ಮೈಸೂರು: ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭವಾಗಿದ್ದು, ಎಚ್.ಡಿ ದೇವೇಗೌಡರು ಮುಂದಿನ ಪ್ರಧಾನಮಂತ್ರಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. 
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಪ್ರಾದೇಶಿಕ ಪಕ್ಷಗಳೊಂದಿಗೆ ಸೇರಿ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣ, ಮಧ್ಯ ಈಶಾನ್ಯ ಭಾಗದಲ್ಲಿಯೂ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿದೆ. ಇದನ್ನು ಗಮನಿಸಿದರೆ ಇಂದಿನ ರಾಜಕೀಯ ಪ್ರಾಂತೀಯ ಪಕ್ಷಗಳ ಕಡೆ ವಾಲಿರುವುದು ತಿಳಿಯುತ್ತದೆ.
ಜನರು ಸ್ಥಳೀಯ ಪಕ್ಷಗಳಿಗೆ ಒಲವು ತೋರುತ್ತಿದ್ದಾರೆ. ಹಾಗಾಗಿ ಈ ಪಕ್ಷಗಳು ಒಗ್ಗೂಡಿ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಕಾಲ ಬಂದಿದೆ. ಈ ಕಾರ್ಯದಲ್ಲಿ ಮುಂದಾಳತ್ವ ವಹಿಸುವ ಶಕ್ತಿ ದೇವೇಗೌಡ ಅವರಿಗಿದೆ ಎಂದು ಹೇಳಿದರು.
ನಾಯಕತ್ವದ ಎಲ್ಲಾ ಲಕ್ಷಣಗಳನ್ನು ಹೊಂದಿರುವ ಸಚಿವ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ ಅವರು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಎಂದು ಎಚ್‌.ವಿಶ್ವನಾಥ್‌ ಹೇಳಿದರು. 'ಪ್ರಜ್ವಲ್‌ ರಾಜಕೀಯ ಭವಿಷ್ಯ ಉಜ್ವಲವಾಗಿದೆ. ಆತನಿಗೆ ಸಾಕಷ್ಟು ದೂರದೃಷ್ಟಿ ಇದ್ದು, ಕನ್ನಡ ಹಾಗೂ ಇಂಗ್ಲಿಷ್‌ ಭಾಷೆ ಮೇಲೆ ಹಿಡಿತವಿದೆ. ಅಲ್ಲದೆ, ನಾಯಕತ್ವದ ಗುಣಗಳನ್ನೂ ಮೈಗೂಡಿಸಿಕೊಂಡಿದ್ದಾರೆ. ಹೀಗಾಗಿ ಆತ ರಾಜಕೀಯದಲ್ಲಿ ಉತ್ತಮವಾಗಿ ಬೆಳೆಯುವ ಭರವಸೆಯ ನಾಯಕನಾಗಲಿದ್ದಾರೆ,'' ಎಂದು ಬಣ್ಣಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT