ಬಿ.ಜೆ.ಪುಟ್ಟಸ್ವಾಮಿ 
ರಾಜಕೀಯ

ಬಿಎಸ್​ವೈ ಸಂಧಾನ ಯಶಸ್ವಿ: ಪಕ್ಷದ ಹುದ್ದೆಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಬಿ.ಜೆ.ಪುಟ್ಟಸ್ವಾಮಿ

ವಿಧಾನ ಪರುಇಷತ್ ಮಾಜಿ ಸದಸ್ಯ, ಬಿಜೆಪಿ ನಾಯಕರಾದ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ಬೆಂಗಳೂರು: ವಿಧಾನ ಪರುಇಷತ್ ಮಾಜಿ ಸದಸ್ಯ, ಬಿಜೆಪಿ ನಾಯಕರಾದ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.
ರಾಜ್ಯ ವಿರೋಧ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಧಾನದ ಬಳಿಕ ಪುಟ್ತಸ್ವಾಮಿ ತಮ್ಮ ರಾಜೀನಾಮೆ ಹಿಂದೆ ಪಡೆದಿದ್ದಾರೆ. ಹಾಗೇ ಅವರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಮುಂದುವರಿಯಲು ಒಪ್ಪಿಕೊಂಡಿದ್ದಾರೆ.
ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪುತ್ಟಸ್ವಾಮಿ "ಯಡಿಯೂರಪ್ಪ  ತನ್ನೊಂದಿಗೆ ನಡೆಸೊದ ಮಾತುಕತೆ, ನೀಡಿದ ಆದೇಶವನ್ನು ಮನ್ನಿಸಿರುವ ನಾನು ಪ್ರಧಾನಿ ಮೋದಿ ಅವರ ಕಾರ್ಯಕ್ಷಮತೆಯನ್ನು ಬೆಂಬಲಿಸುವುದರೊಡನೆ ಜೂನ್ 18ರಂದು ತಾನು ನೀಡಿದ್ದ ರಾಜೀನಾಮೆಯನ್ನು ಹಿಂಪಡೆಯುತ್ತೇನೆ" ಎಂದು ಬರೆದುಕೊಂಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಚೆ ಇದ್ದ ಪುತ್ತಸ್ವಾಮಿ ಇದಕ್ಕೆ ಅವಕಾಶ ದೊರಕದೆ ಹೋದಾಗ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.ಅದಲ್ಲದೆ ಪಕ್ಷದ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ ಅವರ ರಾಜೀನಾಮೆಯನ್ನು ಅಂಗೀಕರಿಸದ ಯಡಿಯೂರಪ್ಪ ಎರಡು ತಿಂಗಳ ಬಳಿಕ ಅವರ ಮನವೊಲಿಸಿ ಮತ್ತೆ ಪದವಿಯಲ್ಲಿ ಮುಂದುವರಿಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT