ಸಿದ್ದರಾಮಯ್ಯ 
ರಾಜಕೀಯ

ನನಗೆ ಎಲ್ಲಾ ಜನರ ಆಶೀರ್ವಾದ ಇದೆ, ಮತ್ತೆ ಮುಖ್ಯಮಂತ್ರಿಯಾಗುವೆ: ಮಾಜಿ ಸಿಎಂ ಸಿದ್ದರಾಮಯ್ಯ

ನನಗೆ ಜನರ ಆಶೀರ್ವಾದ ಇದೆ, ನಾನು ಎಲ್ಲಾ ಜಾತಿಯ ಬಡವರಿಗೆ ಸಹಾಯ ಮಾಡಿದ್ದೇನೆ. ಹೀಗಾಗಿ ನಾನು ಇನ್ನೊಮ್ಮೆ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನ: ನನಗೆ ಜನರ ಆಶೀರ್ವಾದ ಇದೆ, ನಾನು ಎಲ್ಲಾ ಜಾತಿಯ ಬಡವರಿಗೆ ಸಹಾಯ ಮಾಡಿದ್ದೇನೆ. ಹೀಗಾಗಿ ನಾನು ಇನ್ನೊಮ್ಮೆ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನ ಜಿಲ್ಲೆ ಹೊಳೇನರಸೀಪುರದ ಹಾಡ್ಯಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ "ರಾಜಕೀಯದಲ್ಲಿ ಇಂದು ಹಣ, ಜಾತಿಯ ಪಾರಮ್ಯವಿದೆ. ಇದು ಅಪಾಯಕಾರಿ. ಜನರಿಗಾಗಿ ಕೆಲಸ ಮಾಡುವವರನ್ನೇ ಅಧಿಕಾರಕ್ಕೆ ತರಬೇಕು. ಎಂದಿದ್ದಾರೆ.
ಈ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಗದ್ದುಗೆ ಏರುವ ಬಯಕೆ ವ್ಯಕ್ತಪಡಿಸಿರುವ ಸಿದ್ದರಾಮಯ್ಯ  ತಾನು ಮುಖ್ಯಮಂತ್ರಿಯಾಗಿದ್ದಾಗ ಅಕ್ಕಿ, ಪಶು ಶೂ, ಸೇರಿ ಅನೇಕ ಭಾಗ್ಯಗಳ ಯೋಜನೆ ಜಾರಿಗೆ ತಂದಿದ್ದೆ. ಇದನ್ನು ನಾನು ಒಂದೇ ಜಾತಿ ಅಥವಾ ಸಮುದಾಯಕ್ಕಾಗಿ ಜಾರಿಗೆ ತಂದಿರಲಿಲ್ಲ. ಎಲ್ಲರಿಗೂ ಇದರಲ್ಲಿ ಪಾಲಿದೆ. ಎಂದರು.
"ರಾಜಕೀಯ ಹರಿವ ನಿರು. ಬದಲಾವಣೆ ಆಗಲೇಬೇಕು. ನಾನು ಹೆದರುವವನಲ್ಲ ಹೋರಾಟ ಮುಂದುವರಿಯುತ್ತದೆ. ಸಮಾಜದಲ್ಲಿ ಜಾತಿ ಭಾವನೆ ಇರದೆ ಹೋಗಬೇಕು. ಬಸವಣ್ಣ, ಅಂಬೇಡ್ಕರ್ ಹಾದಿಯಲ್ಲಿ ಎಲ್ಲರೂ ಸಾಗಬೇಕು.
"ನಾನು ಜನರ ಆಶೀರ್ವಾದದಿಂದ ಮತ್ತೆ ಅಧಿಕಾರಕ್ಕೆ ಬರುತ್ತೇನೆ.ಆಗ ಸರ್ಕಾರಿ ಯೋಜನೆ ಗುತ್ತಿಗೆಗಳಲ್ಲಿ ಮೀಸಲಾತಿಗೆ ಅವಕಾಶ ಕಲ್ಪಿಸುತ್ತೇನೆ. ಹಿಂದೆ ಪಂಚಾಯತಿ ವಿಭಾಗಗಳಲ್ಲಿ ಮೀಸಲಾತಿ ತಂದದ್ದು ನಾನು.ಆದರೆ ಇಂದು ಅದನ್ನು ತಾವು ಮಾಡಿದ್ದೆಂದು ಬೇರೆಯವರು ಹೇಳಿಕೊಂಡು ತಿರುಗುತ್ತಿದ್ದಾರೆ" ಎಂದು ವ್ಯಂಗ್ಯವಾಡುದ್ದಾರೆ.
ಹಾಡ್ಯಗ್ರಾಮದಲ್ಲಿ ಈಶ್ವರ ದೇವಸ್ಥಾನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
"ದೇವರು ಎಲ್ಲೆಡೆಯೂ ಇದ್ದಾನೆ. ಭಕ್ತಿಯಿಂದ ಪೂಜಿಸಿದವರಿಗೆ ದೇವರು ದರ್ಶನ ಕೊಡುವನು. ವರನಟ ರಾಜ್ ಕುಮಾರ್ "ಅಭಿಮ್ಮಾನಿಗಳೇ ದೇವರು" ಎಂದಿದ್ದನ್ನು ನಾನು ಮರೆಯಬಾರದು.ಆತ್ಮ ಸಾಕ್ಷಿಗೆ ನಡೆದುಕೊಳ್ಳುವುದು ಮಹಾನ್ ಪೂಜೆಯಾಗುತ್ತದೆ" ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT