ಸಿದ್ದರಾಮಯ್ಯ ಮತ್ತು ವಿಶ್ವನಾಥ್ 
ರಾಜಕೀಯ

ಮತ್ತೆ ಸಿಎಂ ಆಗುತ್ತೇನೆ ಹೇಳಿಕೆ: ಮೈತ್ರಿ ಸರ್ಕಾರದಲ್ಲಿ ಅಪಸ್ವರ, ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ

ಮತ್ತೆ ಸಿಎಂ ಆಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ್ದ ಸಾಂದರ್ಭಿಕ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ...

ಬೆಂಗಳೂರು: ಮತ್ತೆ ಸಿಎಂ ಆಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ್ದ ಸಾಂದರ್ಭಿಕ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. 
ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಮನ್ವಯ ಸಮಿತಿ ಇರುವುದು ಒಡೆಯುವುದಕ್ಕಲ್ಲ. ಕಟ್ಟುವುದಕ್ಕೆ. ಸರ್ಕಾರ ಮತ್ತು ಮೈತ್ರಿ ಪಕ್ಷಗಳ ನಡುವೆ ಸೌಹಾರ್ತದೆ ಮೂಡಿಸುವುದಕ್ಕೆ. ಮುಂದಿನ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಹೇಳಿದ್ದಾರೆ. 
ಮೈತ್ರಿ ಸರ್ಕಾರ ಸುಗಮವಾಗಿ ಸಾಗಿಸುವಲ್ಲಿ ಸಿದ್ದರಾಮಯ್ಯ ಅವರು ವಿಫಲರಾಗುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಮೂಡುವ ಬಿರುಕುಗಳು ಹಾಗೂ ಬಿಕ್ಕಟ್ಟನ್ನು ಸರಿಪಡಿಸುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಇದಕ್ಕಾಗಿ ವಿಧಾನಸೌಧದಲ್ಲಿ ಅವರಿಗೆ ಕಚೇರಿಯನ್ನೂ ನೀಡಲಾಗಿದೆ. ಆದರೆ, ಸಿದ್ದರಾಮಯ್ಯ ಅವರೇ ಸ್ವತಃ ಮೈತ್ರಿ ಸರ್ಕಾರವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳುವ ಬಗ್ಗೆ ಸಿದ್ದರಾಮಯ್ಯ ಅವರು ಬೆದರಿಕೆಗಳನ್ನು ಹಾಕುತ್ತಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರ್ಕಾರವನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯ ಚುನಾವಣೆ ಅಂತಿಮಗೊಳ್ಳುವವರೆಗೂ ಶಾಂತಿಯುತವಾಗಿರುತ್ತೇವೆ. ನಂತರ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಈ ವಿಚಾರವನ್ನು ತರಲಾಗುತ್ತದೆ ಜೆಡಿಎಸ್ ನಾಯಕರು ಹೇಳಿದ್ದಾರೆ. 
ಆಗಸ್ಟ್ 31ರ ಬಳಿಕ ಸ್ಥಳೀಯ ಚುನಾವಣೆ ಅಂತಿಮಗೊಂಡ ಬಳಿಕ ಈ ಕುರಿತು ದೇವೇಗೌಡ ಹಾಗೂ ಕುಮಾರಸ್ವಾಮಿಯವರೊಂದಿಗೆ ಮಾತುಕತೆ ನಡೆಸುತ್ತೇನೆ. ನಂತರ ದೇವೇಗೌಡ ಅವರೇ ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸುತ್ತಾರೆ, ಸಮನ್ವಯ ಸಮಿತಿಯಲ್ಲಿ ನನ್ನನ್ನು ಸೇರ್ಪಡೆಗೊಳಿಸುತ್ತಾರೆಂದು ವಿಶ್ವನಾಥ್ ಅವರು ಹೇಳಿದ್ದಾರೆ. 
ಸಮನ್ನವ ಸಮಿತಿಗೆ ನನ್ನನ್ನು ಸೇರ್ಪಡೆಗೊಳಿಸುವುದಕ್ಕೆ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಾನು ಜೆಡಿಎಸ್ ರಾಜ್ಯಾಧ್ಯಕ್ಷ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರೊಂದಿಗೆ ನಾನು ಕೂಡ ಸಮನ್ವಯ ಸಮಿತಿಯಲ್ಲಿರಬೇಕು. ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಒಪ್ಪಿಗೆ ನೀಡಿದ್ದರೂ, ಸಿದ್ದರಾಮಯ್ಯ ಅವರು ಒಪ್ಪುದ್ದಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT