ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ 
ರಾಜಕೀಯ

ಸತೀಶ್ ಕಾಲು ಕಸ ಆಗಲು ಹೆಬ್ಬಾಳ್ಕರ್ ಲಾಯಕ್ಕಿಲ್ಲ-ರಮೇಶ್ ಜಾರಕಿಹೊಳಿ: ಸತೀಶ್ ನನ್ನ ಮಹಾಗುರು ಲಕ್ಷ್ಮಿ ತಿರುಗೇಟು!

ಮಾಜಿ ಸಚಿವ ಹಾಗೂ ಸಹೋದರ ಶಾಸಕ ಸತೀಶ್ ಜಾರಕಿ ಹೊಳಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ತಿರುಗಿ ಬಿದ್ದಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ...

ಬೆಳಗಾವಿ: ಮಾಜಿ ಸಚಿವ ಹಾಗೂ ಸಹೋದರ ಶಾಸಕ ಸತೀಶ್ ಜಾರಕಿ ಹೊಳಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ತಿರುಗಿ ಬಿದ್ದಿರುವ  ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರು ಹರಿಹಾಯ್ದಿದ್ದಾರೆ. ಪಿಎಲ್ ಡಿ ಬ್ಯಾಂಕ್ ಚುನಾವಣೆ ಮುಂದೂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್  ತಹಶೀಲ್ದಾರ್ ಕಚೇರಿ ಎದುರು ರಾತ್ರಿ ಧರಣಿ ನಡೆಸಿದ್ದರು.
ಈ ಸಂಬಂಧ ಕಿಡಿ ಕಾರಿದ್ದ ರಮೇಶ್ ಜಾರಕಿಹೊಳಿ,  ನೀವು ಹೊಸ ಶಾಸಕರು, ಬಹಳ ಜನರು ನೋಡುತ್ತಿರುತ್ತಾರೆ, ಅದನ್ನು ಮರೆಯಬೇಡಿ, ಸತೀಶ್ ಜಾರಕಿಹೊಳಿ ಅವರ ಕಾಲಿನ ಕಸ ಆಗಲು ಲಕ್ಷ್ಮಿ ಹೆಬ್ಬಾಳ್ಕರ್ ಲಾಯಕ್ಕಿಲ್ಲ ಎಂದು ಹರಿಹಾಯ್ದಿದ್ದಾರೆ.
ಪಿಎಲ್‍ಡಿ ಬ್ಯಾಂಕ್‍ಗೆ 20 ವರ್ಷದಿಂದ ರಾಜಕೀಯ ಮುಕ್ತ ಚುನಾವಣೆ ನಡೆದಿದೆ. ಸಚಿವರು, ಶಾಸಕರು ಯಾರೊಬ್ಬರು ಪಾಲ್ಗೊಂಡಿಲ್ಲ. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ನಿರ್ದೇಶಕರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಗೊಂದಲ ವಿಚಾರದಲ್ಲಿ ಪ್ರತಿಕ್ರಿಯಿಸಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಅಂತಾ ತಿಳಿಸಿದ್ದಾರೆ.
ಇನ್ನೂ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ , ಶಾಸಕ ಸತೀಶ್ ಜಾರಕಿಹೊಳಿ ದೊಡ್ಡವರು ಅವರಿಂದ ತುಂಬ ಕಲಿಯಬೇಕು, ಅವರೇ ನನಗೆ ಆದರ್ಶ, ಮಹಾ ಗುರು ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ..
ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ವಿಚಾರದಲ್ಲಿ ಕೆಲ ಶಕ್ತಿಗಳು ಪ್ರತಿಭಟನೆ ವೇಳೆ ಗಲಾಟೆಗೆ ಯತ್ನ ನಡೆಸಿದವು. ತಹಶೀಲ್ದಾರ್ ಏಕಾಏಕಿ ಚುನಾವಣೆ ಮುಂದೂಡಿದ್ದಾರೆ. ಈ ಮೂಲಕ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ನ 9 ಜನ ನಿರ್ದೇಶಕರು ನನ್ನ ಜೊತೆಗಿದ್ದಾರೆ. ತಹಶೀಲ್ದಾರ್ ತಪ್ಪು ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು, ಅಲ್ಲಿಯವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ. ನ್ಯಾಯ ಸಿಗದಿದ್ರೆ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT