ರಾಹುಲ್ ಗಾಂಧಿ, ಎಚ್. ಡಿ. ಕುಮಾರಸ್ವಾಮಿ 
ರಾಜಕೀಯ

ರಾಜ್ಯ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಆಗ್ರಹ

ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ನವದೆಹಲಿ: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ  ಸಂಪುಟ ವಿಸ್ತರಣೆಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ  ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ  ಸಭೆಯಲ್ಲಿ ಸುಧೀರ್ಘ ಹೊತ್ತು ಮಾತುಕತೆ ನಡೆಸಿದ ಕುಮಾರಸ್ವಾಮಿ, ಸಂಮ್ಮಿಶ್ರ ಸರ್ಕಾರದ 100 ದಿನಗಳ ಕಾರ್ಯನಿರ್ವಹಣೆ ಬಗ್ಗೆ  ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಿದರು. ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಿಂದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುವುದಾಗಿ  ಕುಮಾರಸ್ವಾಮಿ ತಿಳಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿ ಅಧ್ಯಕ್ಷ- ಉಪಾಧ್ಯಕ್ಷರ ನೇಮಕ ಸಂಬಂಧ ಶೀಘ್ರವೇ ನಿರ್ಧಾರ  ಕೈಗೊಳ್ಳುವಂತೆ ರಾಹುಲ್ ಗಾಂಧಿ ಅವರ ಬಳಿ ಮನವಿ ಮಾಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಪ್ರಸ್ತುತ 16 ಕಾಂಗ್ರೆಸ್ ಸಚಿವರು, ಹಾಗೂ 10 ಜೆಡಿಎಸ್  ಸದಸ್ಯರು ಸಂಪುಟದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಮೂರು ಹಾಗೂ ಜೆಡಿಎಸ್ ನಿಂದ ಒಂದು ಸ್ಥಾನ ತುಂಬಲು ನಿರ್ಧರಿಸಲಾಗಿದೆ.

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಹೇಳಿರುವ ಹೇಳಿಕೆ ಬಗ್ಗೆ ನಾಳೆ ನಡೆಯಲಿರುವ ಜೆಡಿಎಸ್- ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗುವ ಸಂಬಂಧವೂ ಕುಮಾರಸ್ವಾಮಿ, ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸಿದ್ದಾರೆ

ಸಿದ್ದರಾಮಯ್ಯ ಪ್ರತಿಕ್ರಿಯೆ ಕುರಿತಂತೆ ಮಾತನಾಡಿದ ಕುಮಾರಸ್ವಾಮಿ, ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುವೆ ಎಂದು ಹೇಳಿರುವುದರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯ ನಾಯಕತ್ವದಡಿಯಲ್ಲಿ  ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.  ಸರ್ಕಾರ ಸುಗಮವಾಗಿ ಸಾಗಲು ಸಿದ್ದರಾಮಯ್ಯ ಅಗತ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT