ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ರೈತರನ್ನು ಗೂಂಡಾಗಳೆಂದ ಸಿಎಂ ವಿರುದ್ಧ 'ಅಧಿಕಾರ ಬಿಟ್ಟು ತೊಲಗಿ' ಪ್ರತಿಭಟನೆ: ಬಿ.ಎಸ್. ಯಡಿಯೂರಪ್ಪ

ರೈತರನ್ನು ಗೂಂಡಾಗಳೆಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಅಧಿಕಾರ ಬಿಟ್ಟು ತೊಲಗಿ ಎಂಬ ಉದ್ದೇಶದಿಂದ ಬಿಜೆಪಿ ಬೃಹತ್ ರೈತರ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ...

ಬೆಂಗಳೂರು: ರೈತರನ್ನು ಗೂಂಡಾಗಳೆಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಅಧಿಕಾರ ಬಿಟ್ಟು ತೊಲಗಿ ಎಂಬ ಉದ್ದೇಶದಿಂದ ಬಿಜೆಪಿ ಬೃಹತ್ ರೈತರ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರನ್ನೂ ಗೂಂಡಾಗಳೆಂದು ಕರೆಯುವ ಮೂಲಕ ಕುಮಾರಸ್ವಾಮಿಯವರು ರೈತರಿಗೆ ಅವಮಾನ ಮಾಡಿದ್ದಾರೆ. ತಮ್ಮ ಹುಟ್ಟೂರಿನ ಸುತ್ತಮುತ್ತಲಿನ ನಾಲ್ಕು ಜಿಲ್ಲೆಗಳಿಗೆ ಮಾತ್ರವೇ ಸೀಮಿತರಾಗಿರುವ ಮುಖ್ಯಮಂತ್ರಿಗಳು, ರಾಜ್ಯದ ಇತರೆ ಭಾಗಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ವಿರುದ್ಧ ಅಧಿಕಾರ ಬಿಟ್ಟು ತೊಲಗಿ ಎಂಬ ಉದ್ದೇಶದಿಂದ ಬಿಜೆಪಿ ಬೃಹತ್ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಕನಿಷ್ಠ 1 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. 
ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಪರಿಸ್ಥಿತಿಯಿದ್ದರೂ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಹೀಗಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡ್ಯದಲ್ಲಿ ತಾವೇ ನೆಟ್ಟ ಭತ್ತ ಕಟಾವು ಮಾಡಿ ಪೂಜೆ ಸಲ್ಲಿಸಿರುವುದು ಕೇವಲ ಶೋಗೋಸ್ಕರ ಎಂದು ಆರೋಪಿಸಿದ್ದಾರೆ. 
ಬರಗಾಲದಿಂದ ತತ್ತರಿಸಿರುವ ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಸಮ್ಮಿಶ್ರ ಸರ್ಕಾರ ಬರಗಲಾವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬಿಜೆಪಿ 5 ತಂಡಗಳನ್ನು ಮಾಡಿ ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ಕೈಗೊಂಡಿದೆ. ಕುಮಾರಸ್ವಾಮಿಯವರಿಗೆ ಒಂದು ಕ್ಷಣವೂ ನೈತಿಕತೆ ಇಲ್ಲ. ಬಿಜೆಪಿ, ಮಾಧ್ಯಮಗಳ ಪ್ರತಿನಿಧಿಗಳ ಬಗ್ಗೆ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದಾರೆ. ರೈತ ಹೋರಾಟಗಾರರನ್ನು ಗೂಂಡಾಗಳು ಎಂದು ಕರೆದಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರದ ವಿರುದ್ಧ ರಣತಂತ್ರವನ್ನು ರೂಪಿಸಲಾಗಿದ್ದು, ಅಧಿಕಾರವನ್ನು ಬಿಟ್ಟು ತೊಲಗಿ ಎಂಬ ಉದ್ದೇಶದಿಂದ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆಂ. ರಾಜ್ಯದ ರೈತರು ಜ್ವಲಂತ ಸಮಸ್ಯೆಗಲನ್ನು ಎದುರಿಸುತ್ತಿದ್ದಾರೆ. ನಾವು ಸಮಸ್ಯೆಗಳ ಕುರಿತು ಚರ್ಚೆ ಮಾಡಲಿದ್ದೇವೆಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT