ಸಂಗ್ರಹ ಚಿತ್ರ 
ರಾಜಕೀಯ

ಬೆಳಗಾವಿ ಅಧಿವೇಶನ: ಅತೃಪ್ತ 10 ಕಾಂಗ್ರೆಸ್ ಶಾಸಕರು ಗೈರು ಹಾಜರು ಸಾಧ್ಯತೆ

ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆಯಾಡುತ್ತಿದ್ದು, ಈ ನಡುವಲ್ಲೇ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ 10 ಅತೃಪ್ತ ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ...

ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆಯಾಡುತ್ತಿದ್ದು, ಈ ನಡುವಲ್ಲೇ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ 10 ಅತೃಪ್ತ ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ. 
ಕಾಂಗ್ರೆಸ್ ಶಾಸಕರ ಬಗ್ಗೆ ಮೈತ್ರಿ ಸರ್ಕಾರದಲ್ಲಿ ತಾರತಮ್ಯ ತೋರಲಾಗುತ್ತಿದೆ ಮತ್ತು ಕಾಂಗ್ರೆಸ್ ಶಾಸಕರು ಹೇಳಿದ ಕೆಲಸಗಳಿಗಿಂದ ಆ ಕ್ಷೇತ್ರದ ಜೆಡಿಎಸ್ ನಾಯಕರ ಮಾತುಗಳಿಗೆ ಹೆಚ್ಚಿನ ಮನ್ನಣೆ ನೀಡಲಾಗತ್ತಿದೆ ಎಂಬ ಅಸಮಾಧಾನ ಕಾಂಗ್ರೆಸ್ ನಲ್ಲಿ ತೀವ್ರವಾಗಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನಕ್ಕೆ 10 ಕಾಂಗ್ರೆಸ್ ಶಾಸಕರು ಗೈರು ಹಾಜರಾಗಲಿದ್ದಾರೆಂದು ಜಾರಕಿಹೊಳಿ ಆಪ್ತ ಮೂಲಗಳು ಮಾಹಿತಿ ನೀಡಿವೆ. 
ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಮೂಲದ ಕಾಂಗ್ರೆಸ್ ಶಾಸಕರು ಅಧಿವೇಶನಕ್ಕೆ ಗೈರಾಗಲಿದ್ದಾರೆಂದು ತಿಳಿದುಬಂದಿದೆ. 
ಕಳೆದ ಕೆಲ ವಾರಗಳಿಂದಲೂ ಜಾರಕಿಹೊಳಿ ನೇತೃತ್ವದ ತಂಡ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು, ಸಂಪುಟ ವಿಸ್ತರಣೆಯಾದ ಬಳಿಕ ಈ ತಂಡ ಅಂತಿಮ ನಿರ್ಧಾಗಳನ್ನು ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. 
ಈಗಾಗಲೇ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆಂಬ ಆರೋಪಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ, ಅಧಿವೇಶಕ್ಕೆ ಕಾಂಗ್ರೆಸ್ ಶಾಸಕರ ಗೈರು ಹಾಜರು ದೊಡ್ಡ ತಲೆನೋವಾಗಿ ಪರಿಣಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?